ಎಚ್.ಡಿ. ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಹಾಜರಿದ್ದು ನಿಖಿಲ್ಗೆ ಶುಭ ಹಾರೈಸಿದರು. ಯುಕ್ತಿ ತರೇಜ ಚಿತ್ರದ ನಾಯಕಿ. ‘ಸೆಪ್ಟೆಂಬರ್ನಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಂದು ವರ್ಷದಿಂದ ಈ ಚಿತ್ರಕ್ಕಾಗಿ ನಿರ್ದೇಶಕರು ಕೆಲಸ ಮಾಡುತ್ತಿದ್ದಾರೆ. ಬಹಳ ಭರವಸೆ ಇರುವ ಚಿತ್ರ. ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಕ್ರಿಯನಾಗಿ ವರ್ಷಕ್ಕೆ ಮೂರು ಸಿನಿಮಾ ಮಾಡುತ್ತೇನೆ’ ಎಂದರು ನಿಖಿಲ್ ಕುಮಾರಸ್ವಾಮಿ.