<p>‘ರೈಡರ್’ ಸಿನಿಮಾದ ನಂತರ ರಾಜಕೀಯ ಕಾರಣದಿಂದ ಸಿನಿಮಾ ಕೆಲಸಗಳಿಂದ ದೀರ್ಘ ಬ್ರೇಕ್ ತೆಗೆದುಕೊಂಡಿದ್ದ ನಿಖಿಲ್ ಕುಮಾರಸ್ವಾಮಿ, ಇದೀಗ ಹೆಸರಿಡದ ನೂತನ ಚಿತ್ರದ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳಿದ್ದಾರೆ.</p>.<p>ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಚಿತ್ರದ ಮೂಲಕ ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದೆ. ತಮಿಳಿನಲ್ಲಿ ‘ಬೋಗನ್’, ‘ಭೂಮಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.</p>.<p>ಎಚ್.ಡಿ. ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಹಾಜರಿದ್ದು ನಿಖಿಲ್ಗೆ ಶುಭ ಹಾರೈಸಿದರು. ಯುಕ್ತಿ ತರೇಜ ಚಿತ್ರದ ನಾಯಕಿ. ‘ಸೆಪ್ಟೆಂಬರ್ನಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಂದು ವರ್ಷದಿಂದ ಈ ಚಿತ್ರಕ್ಕಾಗಿ ನಿರ್ದೇಶಕರು ಕೆಲಸ ಮಾಡುತ್ತಿದ್ದಾರೆ. ಬಹಳ ಭರವಸೆ ಇರುವ ಚಿತ್ರ. ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಕ್ರಿಯನಾಗಿ ವರ್ಷಕ್ಕೆ ಮೂರು ಸಿನಿಮಾ ಮಾಡುತ್ತೇನೆ’ ಎಂದರು ನಿಖಿಲ್ ಕುಮಾರಸ್ವಾಮಿ.</p>.<p>‘ನಾನು ಮಗನಿಗಾಗಿಯೇ ಒಂದು ಕಥೆ ಮಾಡಿಸಿದ್ದೆ. ನಮ್ಮದೇ ನಿರ್ಮಾಣ ಸಂಸ್ಥೆಯಿಂದ ಆ ಸಿನಿಮಾ ಮಾಡಬೇಕು ಎಂದಿತ್ತು. ಆದರೆ ನಿಖಿಲ್ ಆ ಚಿತ್ರ ಮಾಡಲು ಒಪ್ಪಲಿಲ್ಲ. ಅದರಿಂದ ಆಡಿಕೊಳ್ಳುವವರ ಬಾಯಿಗೆ ಆಹಾರವಾಗುತ್ತೀವಿ ಎಂಬ ಭಯ ಆತನಲ್ಲಿತ್ತು. ಈಗಲೂ ಆತ ಒಪ್ಪಿದರೆ ನಮ್ಮದೇ ನಿರ್ಮಾಣ ಸಂಸ್ಥೆ ಚಿತ್ರವೊಂದು ತಯಾರಾಗಲಿದೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಅಜನೀಶ್ ಲೋಕನಾಥ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ರೈಡರ್’ ಸಿನಿಮಾದ ನಂತರ ರಾಜಕೀಯ ಕಾರಣದಿಂದ ಸಿನಿಮಾ ಕೆಲಸಗಳಿಂದ ದೀರ್ಘ ಬ್ರೇಕ್ ತೆಗೆದುಕೊಂಡಿದ್ದ ನಿಖಿಲ್ ಕುಮಾರಸ್ವಾಮಿ, ಇದೀಗ ಹೆಸರಿಡದ ನೂತನ ಚಿತ್ರದ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳಿದ್ದಾರೆ.</p>.<p>ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಚಿತ್ರದ ಮೂಲಕ ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದೆ. ತಮಿಳಿನಲ್ಲಿ ‘ಬೋಗನ್’, ‘ಭೂಮಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.</p>.<p>ಎಚ್.ಡಿ. ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಹಾಜರಿದ್ದು ನಿಖಿಲ್ಗೆ ಶುಭ ಹಾರೈಸಿದರು. ಯುಕ್ತಿ ತರೇಜ ಚಿತ್ರದ ನಾಯಕಿ. ‘ಸೆಪ್ಟೆಂಬರ್ನಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಂದು ವರ್ಷದಿಂದ ಈ ಚಿತ್ರಕ್ಕಾಗಿ ನಿರ್ದೇಶಕರು ಕೆಲಸ ಮಾಡುತ್ತಿದ್ದಾರೆ. ಬಹಳ ಭರವಸೆ ಇರುವ ಚಿತ್ರ. ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಕ್ರಿಯನಾಗಿ ವರ್ಷಕ್ಕೆ ಮೂರು ಸಿನಿಮಾ ಮಾಡುತ್ತೇನೆ’ ಎಂದರು ನಿಖಿಲ್ ಕುಮಾರಸ್ವಾಮಿ.</p>.<p>‘ನಾನು ಮಗನಿಗಾಗಿಯೇ ಒಂದು ಕಥೆ ಮಾಡಿಸಿದ್ದೆ. ನಮ್ಮದೇ ನಿರ್ಮಾಣ ಸಂಸ್ಥೆಯಿಂದ ಆ ಸಿನಿಮಾ ಮಾಡಬೇಕು ಎಂದಿತ್ತು. ಆದರೆ ನಿಖಿಲ್ ಆ ಚಿತ್ರ ಮಾಡಲು ಒಪ್ಪಲಿಲ್ಲ. ಅದರಿಂದ ಆಡಿಕೊಳ್ಳುವವರ ಬಾಯಿಗೆ ಆಹಾರವಾಗುತ್ತೀವಿ ಎಂಬ ಭಯ ಆತನಲ್ಲಿತ್ತು. ಈಗಲೂ ಆತ ಒಪ್ಪಿದರೆ ನಮ್ಮದೇ ನಿರ್ಮಾಣ ಸಂಸ್ಥೆ ಚಿತ್ರವೊಂದು ತಯಾರಾಗಲಿದೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಅಜನೀಶ್ ಲೋಕನಾಥ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>