ಚಿತ್ರದ ಮೂರನೇ ಹಾಡನ್ನು ಕುಲುಮನಾಲಿಯಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿ ಸತೀಶ್ ಹಾಗೂ ಅದಿತಿ ಜೋಡಿ ಹಾಡಿಗೆ ಹೆಜ್ಜೆ ಹಾಕಿದೆ. ಮನೋಹರ್ ಕಾಂಪಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರವನ್ನು ಪಾರ್ವತಿ ಎಸ್.ಗೌಡ ನಿರ್ಮಾಣ ಮಾಡಿದ್ದಾರೆ. ನಟರಾದ ನಾಗಭೂಷಣ್, ಪೂರ್ಣ, ಶಿವರಾಜ್ ಕೆ.ಆರ್.ಪೇಟೆ ಮತ್ತಿತರರು ಚಿತ್ರದ ತಾರಾಗಣದಲ್ಲಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಚಿತ್ರಕ್ಕಿದೆ.