ದೇಣಿಗೆ ನೀಡುವ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ‘ಕೊಟ್ಟ ಮಾತಿನಂತೆ ನಿರ್ಭಯಾ ಹಂತಕರ ಹ್ಯಾಂಗ್ಮ್ಯಾನ್ಗೆ ₹1 ಲಕ್ಷ ದೇಣಿಗೆ ನೀಡುತ್ತಿದ್ದೇನೆ. ದೇವರು ಎಲ್ಲವನ್ನು ನೋಡುತ್ತಿರುತ್ತಾನೆ. ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲ, ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪಿದಲ್ಲ. ಈ ದಿನಕ್ಕೆ ಹಲ್ಲುಕಚ್ಚಿ ಕಾಯುತ್ತ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳು ನಿದ್ರೆ ಮಾಡದೆ ಕಾದೆ’ ಎಂದು ಬರೆದುಕೊಂಡಿದ್ದಾರೆ.