ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಹಂತಕರ ಹ್ಯಾಂಗ್‌ಮ್ಯಾನ್‌ಗೆ ₹1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್‌ 

Last Updated 20 ಮಾರ್ಚ್ 2020, 8:35 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿರುವ ಪವನ್ ಜಲ್ಲಾದ್ ಅವರಿಗೆ ₹ 1 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದ ನಟ ಜಗ್ಗೇಶ್‌ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

ದೇಣಿಗೆ ನೀಡುವ ಕುರಿತು ಟ್ವೀಟ್‌ ಮಾಡಿರುವ ಜಗ್ಗೇಶ್‌, ‘ಕೊಟ್ಟ ಮಾತಿನಂತೆ ನಿರ್ಭಯಾ ಹಂತಕರ ಹ್ಯಾಂಗ್‌ಮ್ಯಾನ್‌ಗೆ ₹1 ಲಕ್ಷ ದೇಣಿಗೆ ನೀಡುತ್ತಿದ್ದೇನೆ. ದೇವರು ಎಲ್ಲವನ್ನು ನೋಡುತ್ತಿರುತ್ತಾನೆ. ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲ, ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪಿದಲ್ಲ. ಈ ದಿನಕ್ಕೆ ಹಲ್ಲುಕಚ್ಚಿ ಕಾಯುತ್ತ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳು ನಿದ್ರೆ ಮಾಡದೆ ಕಾದೆ’ ಎಂದು ಬರೆದುಕೊಂಡಿದ್ದಾರೆ.

2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಇಂದು ಬೆಳಿಗ್ಗೆ (ಮಾರ್ಚ್‌ 20) ಗಲ್ಲಿಗೇರಿಸಲಾಯಿತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT