ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಜನ್ಮದಿನದ ನೆಪದಲ್ಲಿ ಈ ಚಿತ್ರವನ್ನು ಪುನಃ ಬಿಡುಗಡೆ ಮಾಡಲು ನಿರ್ಮಾಪಕ ಬಿ.ಸಿ. ಪಾಟೀಲ್ ಸಿದ್ಧರಾಗಿದ್ದಾರೆ. ಈ ಚಿತ್ರದಲ್ಲಿ ವಿಷ್ಣುವರ್ಧನ್ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದರು. ಹಣಕ್ಕಾಗಿ ಬ್ಯಾಂಕ್ ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಳ್ಳುವ ದುಷ್ಕರ್ಮಿಗಳನ್ನು ಮಟ್ಟಹಾಕಿ, ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬರುವ ಪಾತ್ರ ಅವರದ್ದು.