<p><strong>ನಾಗ್ಪುರ(ಮಹಾರಾಷ್ಟ್ರ):</strong> ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ನಾಗ್ಪುರದ ವಿಶೇಷ ಪ್ರದರ್ಶನದಲ್ಲಿ ‘ಎಮರ್ಜೆನ್ಸಿ’ ಚಿತ್ರ ವೀಕ್ಷಿಸಿದ್ದಾರೆ.</p><p>1975ರ ತುರ್ತು ಪರಿಸ್ಥಿತಿ ಕಥಾ ಹಂದರವನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ನಿರ್ವಹಿಸಿರುವ ನಟಿ ಕಂಗನಾ ರನೌತ್ ಮತ್ತು ಜಯಪ್ರಕಾಶ್ ನಾರಾಯಣ್ ಅವರ ಪಾತ್ರ ನಿರ್ವಹಿಸಿರುವ ಹಿರಿಯ ನಟ ಅನುಪಮ್ ಕೇರ್ ಜೊತೆಗಿದ್ದರು.</p><p>ಇನ್ಸ್ಟಾಗ್ರಾಮ್ನಲ್ಲಿ ಚಿತ್ರದ ಪ್ರದರ್ಶನ ಕುರಿತಂತೆ ಕಂಗನಾ ಚಿತ್ರಗಳನ್ನು ಹಂಚಿಕೊಂಡಿದ್ದು, ಒಂದು ಚಿತ್ರದಲ್ಲಿ ಕಂಗನಾ, ಗಡ್ಕರಿ ಮತ್ತು ಅನುಪಮ್ ಖೇರ್ ಮಾತುಕತೆ ನಡೆಸುತ್ತಿರುವುದು ಕಂಡುಬಂದಿದೆ.</p><p>ಇದೇ 17ರಂದು ಬಿಡುಗಡೆಯಾಗಲಿರುವ ಎಮರ್ಜೆನ್ಸಿ ಚಿತ್ರವನ್ನು ನಿತಿನ್ಜೀ ಅವರ ಜೊತೆ ವೀಕ್ಷಿಸಿದೆವು ಎಂದು ಕಂಗನಾ ಅಡಿಬರಹ ನೀಡಿದ್ದಾರೆ.</p>. <p>'ನಮ್ಮ ರಾಷ್ಟ್ರದ ಇತಿಹಾಸದ ಕರಾಳ ಅಧ್ಯಾಯವನ್ನು ಅಂತಹ ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯೊಂದಿಗೆ ಪ್ರಸ್ತುತಪಡಿಸಿದ್ದಕ್ಕಾಗಿ ಎಮರ್ಜೆನ್ಸಿ ಚಿತ್ರತಂಡವನ್ನು ಪ್ರಶಂಸಿಸುತ್ತೇನೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ಗಡ್ಕರಿ ತಿಳಿಸಿದ್ದಾರೆ.</p><p>ಚಿತ್ರದಲ್ಲಿ ಅನುಪಮ್ ಖೇರ್ ಅವರ ಅಭಿನಯವನ್ನು ಕೊಂಡಾಡಿರುವ ಕಂಗನಾ, ಅನುಪಮ್ ಖೇರ್ ಚಿತ್ರದ ಹೀರೊ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಅವರಿಲ್ಲದೆ ಸಿನಿಮಾ ಮಾಡಲು ಸಾಧ್ಯವೇ ಆಗುತ್ತಿರಲಿಲ್ಲ ಎಂದಿದ್ದಾರೆ. </p><p>‘ಈ ಚಿತ್ರದಲ್ಲಿ ಅನುಪಮ್ ಜೀ ನಟಿಸುವುದು ನನಗೆ ಬಹಳ ಮುಖ್ಯವಾಗಿತ್ತು. ಅವರು ನಟಿಸಲು ನಿರಾಕರಿಸಿದ್ದರೆ ನಾನು ಈ ಚಿತ್ರವನ್ನೇ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಪರದೆ ಮೇಲೆ ಅವರ ವ್ಯಕ್ತಿತ್ವದ ಚಿತ್ರಣವನ್ನು ಗಮನಿಸಿದರೆ ನಿಮಗೆ ಗೊತ್ತಾಗುತ್ತದೆ. ಮುಖದಲ್ಲಿ ಪ್ರಾಮಾಣಿಕತೆ ಎದ್ದು ಕಾಣುತ್ತದೆ. ಜಯಪ್ರಕಾಶ್ ನಾರಾಯಣ್ ಅವರ ಪಾತ್ರಕ್ಕೆ ಖೇರ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನ್ಯಾಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ’ಎಂದು ಕಂಗನಾ ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ(ಮಹಾರಾಷ್ಟ್ರ):</strong> ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ನಾಗ್ಪುರದ ವಿಶೇಷ ಪ್ರದರ್ಶನದಲ್ಲಿ ‘ಎಮರ್ಜೆನ್ಸಿ’ ಚಿತ್ರ ವೀಕ್ಷಿಸಿದ್ದಾರೆ.</p><p>1975ರ ತುರ್ತು ಪರಿಸ್ಥಿತಿ ಕಥಾ ಹಂದರವನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ನಿರ್ವಹಿಸಿರುವ ನಟಿ ಕಂಗನಾ ರನೌತ್ ಮತ್ತು ಜಯಪ್ರಕಾಶ್ ನಾರಾಯಣ್ ಅವರ ಪಾತ್ರ ನಿರ್ವಹಿಸಿರುವ ಹಿರಿಯ ನಟ ಅನುಪಮ್ ಕೇರ್ ಜೊತೆಗಿದ್ದರು.</p><p>ಇನ್ಸ್ಟಾಗ್ರಾಮ್ನಲ್ಲಿ ಚಿತ್ರದ ಪ್ರದರ್ಶನ ಕುರಿತಂತೆ ಕಂಗನಾ ಚಿತ್ರಗಳನ್ನು ಹಂಚಿಕೊಂಡಿದ್ದು, ಒಂದು ಚಿತ್ರದಲ್ಲಿ ಕಂಗನಾ, ಗಡ್ಕರಿ ಮತ್ತು ಅನುಪಮ್ ಖೇರ್ ಮಾತುಕತೆ ನಡೆಸುತ್ತಿರುವುದು ಕಂಡುಬಂದಿದೆ.</p><p>ಇದೇ 17ರಂದು ಬಿಡುಗಡೆಯಾಗಲಿರುವ ಎಮರ್ಜೆನ್ಸಿ ಚಿತ್ರವನ್ನು ನಿತಿನ್ಜೀ ಅವರ ಜೊತೆ ವೀಕ್ಷಿಸಿದೆವು ಎಂದು ಕಂಗನಾ ಅಡಿಬರಹ ನೀಡಿದ್ದಾರೆ.</p>. <p>'ನಮ್ಮ ರಾಷ್ಟ್ರದ ಇತಿಹಾಸದ ಕರಾಳ ಅಧ್ಯಾಯವನ್ನು ಅಂತಹ ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯೊಂದಿಗೆ ಪ್ರಸ್ತುತಪಡಿಸಿದ್ದಕ್ಕಾಗಿ ಎಮರ್ಜೆನ್ಸಿ ಚಿತ್ರತಂಡವನ್ನು ಪ್ರಶಂಸಿಸುತ್ತೇನೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ಗಡ್ಕರಿ ತಿಳಿಸಿದ್ದಾರೆ.</p><p>ಚಿತ್ರದಲ್ಲಿ ಅನುಪಮ್ ಖೇರ್ ಅವರ ಅಭಿನಯವನ್ನು ಕೊಂಡಾಡಿರುವ ಕಂಗನಾ, ಅನುಪಮ್ ಖೇರ್ ಚಿತ್ರದ ಹೀರೊ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಅವರಿಲ್ಲದೆ ಸಿನಿಮಾ ಮಾಡಲು ಸಾಧ್ಯವೇ ಆಗುತ್ತಿರಲಿಲ್ಲ ಎಂದಿದ್ದಾರೆ. </p><p>‘ಈ ಚಿತ್ರದಲ್ಲಿ ಅನುಪಮ್ ಜೀ ನಟಿಸುವುದು ನನಗೆ ಬಹಳ ಮುಖ್ಯವಾಗಿತ್ತು. ಅವರು ನಟಿಸಲು ನಿರಾಕರಿಸಿದ್ದರೆ ನಾನು ಈ ಚಿತ್ರವನ್ನೇ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಪರದೆ ಮೇಲೆ ಅವರ ವ್ಯಕ್ತಿತ್ವದ ಚಿತ್ರಣವನ್ನು ಗಮನಿಸಿದರೆ ನಿಮಗೆ ಗೊತ್ತಾಗುತ್ತದೆ. ಮುಖದಲ್ಲಿ ಪ್ರಾಮಾಣಿಕತೆ ಎದ್ದು ಕಾಣುತ್ತದೆ. ಜಯಪ್ರಕಾಶ್ ನಾರಾಯಣ್ ಅವರ ಪಾತ್ರಕ್ಕೆ ಖೇರ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನ್ಯಾಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ’ಎಂದು ಕಂಗನಾ ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>