<p>ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ನಿರ್ಮಿಸಿರುವ ಈ ಚಿತ್ರವನ್ನು ವಂಶಿ ನಿರ್ದೇಶಿಸಿ, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ದೀಪಾವಳಿಗೆ ಚಿತ್ರ ತೆರೆಗೆ ಬರಲಿದೆ. ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಲು ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇವೆ’ ಎಂದರು ನಿವೇದಿತಾ ಶಿವರಾಜ್ಕುಮಾರ್.</p>.<p>‘ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಭರವಸೆ ಹಾಗೂ ಸ್ಫೂರ್ತಿಗೆ ಕಾಯುತ್ತಾ ಇರುತ್ತೇವೆ. ಆ ಸಮಯದಲ್ಲಿ ಭರವಸೆಯ ಎಂಬ ಬೆಳಕು ಎಲ್ಲಿಂದಲೋ ಬರುವುದಲ್ಲ, ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ’ ಎಂದು ನಿರ್ದೇಶಕ ವಂಶಿ ತಿಳಿಸಿದರು.</p>.<p>ಅಭಿಲಾಷ್ ಕಳತ್ತಿ ಛಾಯಾಚಿತ್ರಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ನಿರ್ಮಿಸಿರುವ ಈ ಚಿತ್ರವನ್ನು ವಂಶಿ ನಿರ್ದೇಶಿಸಿ, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ದೀಪಾವಳಿಗೆ ಚಿತ್ರ ತೆರೆಗೆ ಬರಲಿದೆ. ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಲು ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇವೆ’ ಎಂದರು ನಿವೇದಿತಾ ಶಿವರಾಜ್ಕುಮಾರ್.</p>.<p>‘ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಭರವಸೆ ಹಾಗೂ ಸ್ಫೂರ್ತಿಗೆ ಕಾಯುತ್ತಾ ಇರುತ್ತೇವೆ. ಆ ಸಮಯದಲ್ಲಿ ಭರವಸೆಯ ಎಂಬ ಬೆಳಕು ಎಲ್ಲಿಂದಲೋ ಬರುವುದಲ್ಲ, ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ’ ಎಂದು ನಿರ್ದೇಶಕ ವಂಶಿ ತಿಳಿಸಿದರು.</p>.<p>ಅಭಿಲಾಷ್ ಕಳತ್ತಿ ಛಾಯಾಚಿತ್ರಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>