<p><strong>ಕೊಟ್ಟಾಯಂ(ಕೇರಳ)</strong>: ಮಲಯಾಳಂ ಸಿನಿಮಾ ಚಿತ್ರಕತೆ ಬರಹಗಾರ, ನಟ ಮತ್ತು ನಾಟಕಕಾರ ಪಿ.ಬಾಲಚಂದ್ರನ್ ಅವರು(69) ಸೋಮವಾರ ನಿಧನರಾದರು.</p>.<p>‘ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ವೈಕಾಮ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆ ಉಸಿರೆಳೆದರು’ ಎಂದು ಮೂಲಗಳು ತಿಳಿಸಿವೆ.</p>.<p>ಮೂರು ದಶಕಗಳ ಕಾಲ ಸಿನಿಮಾರಂಗದಲ್ಲಿ ಕಾರ್ಯನಿರ್ವಹಿಸಿದ ಬಾಲಚಂದ್ರನ್ ಅವರು ‘ಅಂಕಲ್ ಬನ್’, ‘ಉಲ್ಲಾಡಕ್ಕಂ’, ‘ಅಗ್ನಿದೇವನ್’, ‘ಪವಿತ್ರಂ’ ಮತ್ತು ‘ಪುನರಾದಿವಸಂ’ ಸೇರಿದಂತೆ ಹಲವಾರು ಜನಪ್ರಿಯ ಮಲಯಾಳಂ ಚಲನಚಿತ್ರಗಳಿಗೆ ಚಿತ್ರಕತೆ ಬರೆದಿದ್ದಾರೆ.</p>.<p>ಸಿನಿಮಾ ಜಗತ್ತಿಗೆ ಕಾಲಿಡುವ ಮುನ್ನ ಅವರು ನಾಟಕರಂಗದಲ್ಲಿ ಪ್ರಸಿದ್ಧಿ ಪಡೆದಿದ್ದರು. 1989ರಲ್ಲಿ ಬಾಲಚಂದ್ರನ್ ಅವರು ಅತ್ಯುತ್ತಮ ನಾಟಕ ರಚನೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಾಲಚಂದ್ರನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಾಯಂ(ಕೇರಳ)</strong>: ಮಲಯಾಳಂ ಸಿನಿಮಾ ಚಿತ್ರಕತೆ ಬರಹಗಾರ, ನಟ ಮತ್ತು ನಾಟಕಕಾರ ಪಿ.ಬಾಲಚಂದ್ರನ್ ಅವರು(69) ಸೋಮವಾರ ನಿಧನರಾದರು.</p>.<p>‘ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ವೈಕಾಮ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆ ಉಸಿರೆಳೆದರು’ ಎಂದು ಮೂಲಗಳು ತಿಳಿಸಿವೆ.</p>.<p>ಮೂರು ದಶಕಗಳ ಕಾಲ ಸಿನಿಮಾರಂಗದಲ್ಲಿ ಕಾರ್ಯನಿರ್ವಹಿಸಿದ ಬಾಲಚಂದ್ರನ್ ಅವರು ‘ಅಂಕಲ್ ಬನ್’, ‘ಉಲ್ಲಾಡಕ್ಕಂ’, ‘ಅಗ್ನಿದೇವನ್’, ‘ಪವಿತ್ರಂ’ ಮತ್ತು ‘ಪುನರಾದಿವಸಂ’ ಸೇರಿದಂತೆ ಹಲವಾರು ಜನಪ್ರಿಯ ಮಲಯಾಳಂ ಚಲನಚಿತ್ರಗಳಿಗೆ ಚಿತ್ರಕತೆ ಬರೆದಿದ್ದಾರೆ.</p>.<p>ಸಿನಿಮಾ ಜಗತ್ತಿಗೆ ಕಾಲಿಡುವ ಮುನ್ನ ಅವರು ನಾಟಕರಂಗದಲ್ಲಿ ಪ್ರಸಿದ್ಧಿ ಪಡೆದಿದ್ದರು. 1989ರಲ್ಲಿ ಬಾಲಚಂದ್ರನ್ ಅವರು ಅತ್ಯುತ್ತಮ ನಾಟಕ ರಚನೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಾಲಚಂದ್ರನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>