ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಿಯೇಟರ್‌ಗೆ ಲಗ್ಗೆ ಇಟ್ಟ ಒಡೆಯ

Last Updated 12 ಡಿಸೆಂಬರ್ 2019, 19:30 IST
ಅಕ್ಷರ ಗಾತ್ರ

ನಿರ್ದೇಶಕ ಎಂ.ಡಿ. ಶ್ರೀಧರ್‌ ಮತ್ತು ದರ್ಶನ್‌ ಕಾಂಬಿನೇಷನ್‌ನಡಿ ನಿರ್ಮಾಣಗೊಂಡಿರುವ ಮೂರನೇ ಚಿತ್ರ ‘ಒಡೆಯ’. ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್‌. ಈ ಹಿಂದೆ ಶ್ರೀಧರ್‌ ಅವರು ದರ್ಶನ್‌ಗೆ ‘ಪೊರ್ಕಿ’ ಮತ್ತು ‘ಬುಲ್‌ಬುಲ್‌’ ಚಿತ್ರ ನಿರ್ದೇಶಿಸಿದ್ದರು.

ಈ ಚಿತ್ರದಲ್ಲಿ ದರ್ಶನ್‌ ಅವರದು ಗಜೇಂದ್ರನ ಪಾತ್ರವಂತೆ. ಐವರು ಸಹೋದರರ ಪ್ರೀತಿಯ ಅಣ್ಣನ ಕಥೆ ಇದರಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಸಂದೇಶ್‌ ಪ್ರೊಡಕ್ಷನ್‌ ಲಾಂಛನದಡಿ ಎನ್. ಸಂದೇಶ್‌ ಬಂಡವಾಳ ಹೂಡಿದ್ದಾರೆ.

ಚಿತ್ರಕ್ಕೆ ಸಂಗೀತ ಸಂಯೋಜಿಸಿರುವುದು ಅರ್ಜುನ್‌ ಜನ್ಯ. ಜಯಂತ ಕಾಯ್ಕಿಣಿ, ವಿ. ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಚೇತನ್ ಕುಮಾರ್‌ ಗೀತ ರಚನೆ ಮಾಡಿದ್ದಾರೆ. ಎ.ವಿ. ಕೃಷ್ಣಕುಮಾರ್‌ (ಕೆ.ಕೆ.) ಅವರ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್‌ ಅವರ ಸಂಕಲನವಿದೆ. ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಜಯ್ ಅವರ ಸಾಹಸ ನಿರ್ದೇಶನವಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.ಕೊಡಗಿನ ಬೆಡಗಿ ಸನ ತಿಮ್ಮಯ್ಯ ಈ ಚಿತ್ರದ ನಾಯಕಿ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT