ಚಿತ್ರಕ್ಕೆ ಸಂಗೀತ ಸಂಯೋಜಿಸಿರುವುದು ಅರ್ಜುನ್ ಜನ್ಯ. ಜಯಂತ ಕಾಯ್ಕಿಣಿ, ವಿ. ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಚೇತನ್ ಕುಮಾರ್ ಗೀತ ರಚನೆ ಮಾಡಿದ್ದಾರೆ. ಎ.ವಿ. ಕೃಷ್ಣಕುಮಾರ್ (ಕೆ.ಕೆ.) ಅವರ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಜಯ್ ಅವರ ಸಾಹಸ ನಿರ್ದೇಶನವಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.ಕೊಡಗಿನ ಬೆಡಗಿ ಸನ ತಿಮ್ಮಯ್ಯ ಈ ಚಿತ್ರದ ನಾಯಕಿ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ತಾರಾಗಣದಲ್ಲಿದ್ದಾರೆ.