ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ರಾಜ್ಯೋತ್ಸವಕ್ಕೆ 'ಒಡೆಯ' ಚಿತ್ರದ ಟೀಸರ್‌ ಬಿಡುಗಡೆ 

Last Updated 28 ಅಕ್ಟೋಬರ್ 2019, 5:50 IST
ಅಕ್ಷರ ಗಾತ್ರ

ಬೆಂಗಳೂರು: ನವೆಂಬರ್ 1 ಕನ್ನಡ ರಾಜ್ಯೋತ್ಸವದಂದುನಟ ದರ್ಶನ್‌ ಅಭಿನಯದ 'ಒಡೆಯ' ಚಿತ್ರದ ಟೀಸರ್‌ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲಕೆರಳಿಸಿದೆ.

ಈ ಕುರಿತು ದರ್ಶನ್‌ ಟ್ವೀಟ್‌ ಮಾಡಿದ್ದು, ‘ನ.1 ರಂದು ಒಡೆಯ ಚಿತ್ರದ ಟೀಸರ್‌ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ.ನಿಮ್ಮ ಪ್ರೀತಿ–ಪ್ರೋತ್ಸಾಹಆಶೀರ್ವಾದ ಸದಾ ಹೀಗೆ ಇರಲಿ’ ಎಂದು ಬರೆದುಕೊಂಡಿದ್ದಾರೆ.

ನಿರ್ದೇಶಕ ಎಂ.ಡಿ. ಶ್ರೀಧರ್‌ ಮತ್ತು ನಟ ದರ್ಶನ್‌ ಕಾಂಬಿನೇಷನ್‌ನಡಿ ಮೂಡಿಬರುತ್ತಿರುವ ‘ಒಡೆಯ’ ಚಿತ್ರ ಚಂದನವನದಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್. ಸಿನಿಮಾದಲ್ಲಿ ದರ್ಶನ್‌ ಅವರ ಪಾತ್ರದ ಹೆಸರು ಗಜೇಂದ್ರ. ಇದರಲ್ಲಿ ಐವರು ಸಹೋದರರ ಪ್ರೀತಿಯ ಅಣ್ಣನ ಕಥೆ ಹೆಣೆಯಲಾಗಿದೆ. ತಮಿಳಿನಲ್ಲಿ ನಟ ಅಜಿತ್‌ ನಿಭಾಯಿಸಿದ್ದ ಪಾತ್ರಕ್ಕೆ ದರ್ಶನ್‌ ಜೀವ ತುಂಬಿದ್ದಾರಂತೆ.

ಈ ಹಿಂದೆ ನಿರ್ದೇಶಕ ಎಂ.ಡಿ. ಶ್ರೀಧರ್ ಅವರು ದರ್ಶನ್‌ಗಾಗಿ ‘ಪೊರ್ಕಿ’ ಮತ್ತು ‘ಬುಲ್‌ಬುಲ್‌’ ಚಿತ್ರ ನಿರ್ದೇಶಿಸಿದ್ದರು. ಈ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಫಸಲು ತೆಗೆದಿದ್ದು ಎಲ್ಲರಿಗೂ ಗೊತ್ತು. ಹಾಗಾಗಿಯೇ, ‘ಒಡೆಯ’ನ ಮೇಲೂ ನಿರೀಕ್ಷೆಗಳು ಗರಿಗೆದರಿವೆ.

ಸಂದೇಶ್‌ ಪ್ರೊಡಕ್ಷನ್‌ನಡಿ ಎನ್‌. ಸಂದೇಶ್‌ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಎ.ವಿ. ಕೃಷ್ಣಕುಮಾರ್‌(ಕೆಕೆ) ಅವರ ಛಾಯಾಗ್ರಹಣವಿದೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ತಾರಾಗಣದಲ್ಲಿ ನಿರಂಜನ್‌, ಪಂಕಜ್‌, ಯಶಸ್‌ ಸೂರ್ಯ, ಸಾಧುಕೋಕಿಲ, ಚಿಕ್ಕಣ್, ಅವಿನಾಶ್‌, ರವಿಶಂಕರ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT