<p><strong>ದಾವಣಗೆರೆ</strong>: ಸುಮಂತ್ ಶೈಲೇಂದ್ರ ನಟನೆಯ ‘ಗೋವಿಂದ ಗೋವಿಂದ’ ಚಲನಚಿತ್ರ ನ.26ರಂದುರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ದಾವಣಗೆರೆಯಲ್ಲಿ ತ್ರಿಶೂಲ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.</p>.<p>‘ಶೈಲೇಂದ್ರ ಪ್ರೊಡಕ್ಷನ್, ಎಲ್.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಕವಿತಾ ಗೌಡ ಹಾಗೂ ಭಾವನಾ ಮೆನನ್ ನಟಿಸಿದ್ದಾರೆ’ ಎಂದು ಚಿತ್ರದ ನಿರ್ದೇಶಕ ತಿಲಕ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ವಿಜಯಪುರ ಹಾಗೂ ಮಧುಗಿರಿ, ಚಿಂತಾಮಣಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. 6 ಹಾಡುಗಳ ಜೊತೆಗೆ ಎರಡು ಬಿಟ್ ಸಾಂಗ್ಗಳು ಇದ್ದು, ಚಿತ್ರದ ಮೊದಲ ಅರ್ಧ ಭಾಗ ಹಾಸ್ಯಭರಿತವಾಗಿದ್ದು, ಎರಡನೆಯ ಭಾಗ ಥ್ರಿಲ್ಲರ್ಗೆ ತಿರುಗಿ ಹಾಸ್ಯದಲ್ಲಿ ಕೊನೆಗೊಳ್ಳುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಚಿತ್ರದಲ್ಲಿ ವಿಜಯ್ ಚೆಂಡೂರು ಹಾಗೂ ಪವನ್ಕುಮಾರ್, ರೂಪೇಶ್ ಶೆಟ್ಟಿ ಭೂಮಿಕೆಯಲ್ಲಿ ಇದ್ದಾರೆ. ‘ದೇವ್ ರಂಗಭೂಮಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ’ ಎಂದು ಮಾಹಿತಿ ನೀಡಿದರು.</p>.<p>ಚಿತ್ರ ನಟ ಸುಮಂತ್ ಶೈಲೇಂದ್ರ ಮಾತನಾಡಿ, ‘ನಾನು ದಾವಣಗೆರೆಯಲ್ಲಿ ಹುಟ್ಟಿದ್ದು, ಬೆಂಗಳೂರಿನಲ್ಲಿ ಬೆಳೆದಿದ್ದೇನೆ. ಇದೊಂದು ಕೌಟುಂಬಿಕ ಮನರಂಜನೆಯ ಚಿತ್ರವಾಗಿದೆ. ಯುವಕರಿಗೆ ಇಷ್ಟವಾಗುತ್ತದೆ’ ಎಂದು ಹೇಳಿದರು.</p>.<p>ಚಿತ್ರ ನಟಿ ಕವಿತಾಗೌಡ ಮಾತನಾಡಿ, ‘ಇದೊಂದು ಪ್ಯಾಕೇಜ್ ರೀತಿ ಇದ್ದು, ಹಾಸ್ಯ, ಥ್ರಿಲ್ಲರ್, ನೀತಿಕಥೆ ಇದೆ. ನಟ ಅಚ್ಚುತ್ರಾವ್ ಜೊತೆ ಒಂದು ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಸುಮಂತ್ ಶೈಲೇಂದ್ರ ನಟನೆಯ ‘ಗೋವಿಂದ ಗೋವಿಂದ’ ಚಲನಚಿತ್ರ ನ.26ರಂದುರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ದಾವಣಗೆರೆಯಲ್ಲಿ ತ್ರಿಶೂಲ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.</p>.<p>‘ಶೈಲೇಂದ್ರ ಪ್ರೊಡಕ್ಷನ್, ಎಲ್.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಕವಿತಾ ಗೌಡ ಹಾಗೂ ಭಾವನಾ ಮೆನನ್ ನಟಿಸಿದ್ದಾರೆ’ ಎಂದು ಚಿತ್ರದ ನಿರ್ದೇಶಕ ತಿಲಕ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ವಿಜಯಪುರ ಹಾಗೂ ಮಧುಗಿರಿ, ಚಿಂತಾಮಣಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. 6 ಹಾಡುಗಳ ಜೊತೆಗೆ ಎರಡು ಬಿಟ್ ಸಾಂಗ್ಗಳು ಇದ್ದು, ಚಿತ್ರದ ಮೊದಲ ಅರ್ಧ ಭಾಗ ಹಾಸ್ಯಭರಿತವಾಗಿದ್ದು, ಎರಡನೆಯ ಭಾಗ ಥ್ರಿಲ್ಲರ್ಗೆ ತಿರುಗಿ ಹಾಸ್ಯದಲ್ಲಿ ಕೊನೆಗೊಳ್ಳುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಚಿತ್ರದಲ್ಲಿ ವಿಜಯ್ ಚೆಂಡೂರು ಹಾಗೂ ಪವನ್ಕುಮಾರ್, ರೂಪೇಶ್ ಶೆಟ್ಟಿ ಭೂಮಿಕೆಯಲ್ಲಿ ಇದ್ದಾರೆ. ‘ದೇವ್ ರಂಗಭೂಮಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ’ ಎಂದು ಮಾಹಿತಿ ನೀಡಿದರು.</p>.<p>ಚಿತ್ರ ನಟ ಸುಮಂತ್ ಶೈಲೇಂದ್ರ ಮಾತನಾಡಿ, ‘ನಾನು ದಾವಣಗೆರೆಯಲ್ಲಿ ಹುಟ್ಟಿದ್ದು, ಬೆಂಗಳೂರಿನಲ್ಲಿ ಬೆಳೆದಿದ್ದೇನೆ. ಇದೊಂದು ಕೌಟುಂಬಿಕ ಮನರಂಜನೆಯ ಚಿತ್ರವಾಗಿದೆ. ಯುವಕರಿಗೆ ಇಷ್ಟವಾಗುತ್ತದೆ’ ಎಂದು ಹೇಳಿದರು.</p>.<p>ಚಿತ್ರ ನಟಿ ಕವಿತಾಗೌಡ ಮಾತನಾಡಿ, ‘ಇದೊಂದು ಪ್ಯಾಕೇಜ್ ರೀತಿ ಇದ್ದು, ಹಾಸ್ಯ, ಥ್ರಿಲ್ಲರ್, ನೀತಿಕಥೆ ಇದೆ. ನಟ ಅಚ್ಚುತ್ರಾವ್ ಜೊತೆ ಒಂದು ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>