<p>‘ಕವಲುದಾರಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶಕ ಹೇಮಂತ್ ಎಂ.ರಾವ್ ಇದೀಗ ನಟ ಡಾಲಿ ಧನಂಜಯ ಅವರಿಗೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್ಕುಮಾರ್ ವಿಶೇಷ ಪಾತ್ರದಲ್ಲಿರಲಿದ್ದಾರೆ. </p>.<p>‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ನಿರ್ದೇಶಕ ಹೇಮಂತ್ ಎಂ.ರಾವ್ ‘ಭೈರವನ ಕೊನೆ ಪಾಠ’ ಕೈಗೆತ್ತಿಕೊಂಡಿದ್ದರು. ನಟ ಶಿವರಾಜ್ಕುಮಾರ್ ಅವರು ಆ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ಕಾರಣ ಅದನ್ನು ಹೇಮಂತ್ ಮುಂದೂಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡರು. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರಕ್ಕೆ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಎಂಬ ಶೀರ್ಷಿಕೆ ಇಡಲಾಗಿದೆ. ಚಿತ್ರತಂಡವು ಸದ್ಯ ಕಲಾವಿದರ ಹುಡುಕಾಟದಲ್ಲಿದೆ. ಸಿನಿಮಾವನ್ನು ಡಾ.ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. </p>.<p>70ರ ದಶಕದ ಶೈಲಿ ಚಿತ್ರದ ವೈಶಿಷ್ಟ್ಯವಾಗಿದ್ದು ಶಿವರಾಜ್ಕುಮಾರ್ ಭಿನ್ನವಾದ ಪಾತ್ರದ ಮುಖಾಂತರ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಮತ್ತು ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನವಿರಲಿದೆ. </p>.<p>ಈ ಸಿನಿಮಾ ಬಳಿಕ ಹೇಮಂತ್ ‘ಭೈರವನ ಕೊನೆ ಪಾಠ’ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಿದ್ದಾರೆ. ‘ಈ ಸಿನಿಮಾದಲ್ಲಿನ ಶಿವರಾಜ್ಕುಮಾರ್ ಅವರ ಪಾತ್ರಕ್ಕೆ ಹೆಚ್ಚಿನ ದೈಹಿಕ ಶ್ರಮದ ಅಗತ್ಯವಿದೆ. ಇದರಲ್ಲಿ ಕುದುರೆ ಓಡಿಸಬೇಕು, ತೂಕವುಳ್ಳ ವಸ್ತ್ರಗಳನ್ನು ಧರಿಸಬೇಕು. ಹೀಗಾಗಿ ಅವರು ಈ ಪಾತ್ರಕ್ಕೆ ದೈಹಿಕವಾಗಿ ಸಂಪೂರ್ಣ ಸಿದ್ಧರಿರುವವರೆಗೂ ಮುಂದೂಡುತ್ತಿದ್ದೇವೆ. ಇದೇ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ’ ಎಂದು ಹೇಮಂತ್ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕವಲುದಾರಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶಕ ಹೇಮಂತ್ ಎಂ.ರಾವ್ ಇದೀಗ ನಟ ಡಾಲಿ ಧನಂಜಯ ಅವರಿಗೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್ಕುಮಾರ್ ವಿಶೇಷ ಪಾತ್ರದಲ್ಲಿರಲಿದ್ದಾರೆ. </p>.<p>‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ನಿರ್ದೇಶಕ ಹೇಮಂತ್ ಎಂ.ರಾವ್ ‘ಭೈರವನ ಕೊನೆ ಪಾಠ’ ಕೈಗೆತ್ತಿಕೊಂಡಿದ್ದರು. ನಟ ಶಿವರಾಜ್ಕುಮಾರ್ ಅವರು ಆ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ಕಾರಣ ಅದನ್ನು ಹೇಮಂತ್ ಮುಂದೂಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡರು. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರಕ್ಕೆ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಎಂಬ ಶೀರ್ಷಿಕೆ ಇಡಲಾಗಿದೆ. ಚಿತ್ರತಂಡವು ಸದ್ಯ ಕಲಾವಿದರ ಹುಡುಕಾಟದಲ್ಲಿದೆ. ಸಿನಿಮಾವನ್ನು ಡಾ.ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. </p>.<p>70ರ ದಶಕದ ಶೈಲಿ ಚಿತ್ರದ ವೈಶಿಷ್ಟ್ಯವಾಗಿದ್ದು ಶಿವರಾಜ್ಕುಮಾರ್ ಭಿನ್ನವಾದ ಪಾತ್ರದ ಮುಖಾಂತರ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಮತ್ತು ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನವಿರಲಿದೆ. </p>.<p>ಈ ಸಿನಿಮಾ ಬಳಿಕ ಹೇಮಂತ್ ‘ಭೈರವನ ಕೊನೆ ಪಾಠ’ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಿದ್ದಾರೆ. ‘ಈ ಸಿನಿಮಾದಲ್ಲಿನ ಶಿವರಾಜ್ಕುಮಾರ್ ಅವರ ಪಾತ್ರಕ್ಕೆ ಹೆಚ್ಚಿನ ದೈಹಿಕ ಶ್ರಮದ ಅಗತ್ಯವಿದೆ. ಇದರಲ್ಲಿ ಕುದುರೆ ಓಡಿಸಬೇಕು, ತೂಕವುಳ್ಳ ವಸ್ತ್ರಗಳನ್ನು ಧರಿಸಬೇಕು. ಹೀಗಾಗಿ ಅವರು ಈ ಪಾತ್ರಕ್ಕೆ ದೈಹಿಕವಾಗಿ ಸಂಪೂರ್ಣ ಸಿದ್ಧರಿರುವವರೆಗೂ ಮುಂದೂಡುತ್ತಿದ್ದೇವೆ. ಇದೇ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ’ ಎಂದು ಹೇಮಂತ್ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>