‘ತಂದೆ-ತಾಯಿ ಬಳಿ ಹೇಳಿಕೊಳ್ಳಲಾಗದ ಅನೇಕ ವಿಷಯಗಳನ್ನು ಸ್ನೇಹಿತರ ಬಳಿ ಹೇಳಿಕೊಳ್ಳುತ್ತೇವೆ. ಹಾಗಾಗಿ ನನ್ನ ಪ್ರಕಾರ ಸ್ನೇಹ ಸಂಬಂಧ ಎನ್ನುವುದು ಬಹಳ ದೊಡ್ಡದು. ನನ್ನ ಎಲ್ಲಾ ಸ್ನೇಹಿತರಿಗೆ ಈ ಹಾಡನ್ನು ಅರ್ಪಿಸುತ್ತೇನೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಧ್ವನಿಯಲ್ಲಿ ಕೇಳುವುದೆ ಖುಷಿ. ನಿರ್ದೇಶಕ ಹರಿಪ್ರಸಾದ್ ಸೇರಿದಂತೆ ನನ್ನ ಸಹೃದಯಿ ಸ್ನೇಹಿತರ ತಂಡ ಈ ಚಿತ್ರದಲ್ಲಿ ಭಾಗಿಯಾಗಿದೆ. ಎಲ್ಲರಿಗೂ ಶುಭವಾಗಲಿ’ ಎಂದು ಯೋಗರಾಜ್ ಭಟ್ ಹಾರೈಸಿದರು.