ಮೈಸೂರಿನ ಡಿಆರ್ಸಿ ಮಲ್ಟಿಪ್ಲೆಕ್ಸ್ನಲ್ಲಿ, ಮೃತಪಟ್ಟ ಮಗನಿಗೂ ಒಂದು ಟಿಕೆಟ್ ಖರೀದಿಸಿ, ಆ ಆಸನದಲ್ಲಿ ಮಗನ ಭಾವಷಿತ್ರವನ್ನು ಇಟ್ಟು ಚಿತ್ರವನ್ನು ಪಾಲಕರು ಕುಟುಂಬ ಸಮೇತವಾಗಿ ಆನಂದಿಸಿದ್ದಾರೆ. ಈ ಘಟನೆಯಿಂದ ಭಾವುಕರಾಗಿರುವ ಪುನೀತ್ ರಾಜ್ಕುಮಾರ್, ‘ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿವಂಗತ ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು. ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪ್ರಾರ್ಥಿಸಿದ್ದಾರೆ.