ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಸರಸ್ವತಿಪುರಂ ನಿವಾಸಿ 24 ವರ್ಷದ ಸೂರಜ್, ಒಬ್ಬರೇ ಬುಲೆಟ್ನಲ್ಲಿ ತಮಿಳುನಾಡುವ ಪ್ರವಾಸ ಮುಗಿಸಿ ಮೈಸೂರಿಗೆ ಹಿಂತಿರುಗುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬಲಗಾಲಿನ ಮೊಣ ಕಾಲು ಹಾಗೂ ತೊಡೆಯ ಭಾಗದಲ್ಲಿ ತೀವ್ರ ಜಜ್ಜಿದಂತಾಗಿದೆ. ಹೀಗಾಗಿ, ವೈದ್ಯರ ಸಲಹೆಯಂತೆ ಕಾಲನ್ನು ತೊಡೆವರೆಗೆ ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಟ ಶಿವರಾಜ್ ಕುಮಾರ್, ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್, ನಿರ್ಮಾಪಕ ಚಿನ್ನೇಗೌಡ, ಸಂಬಂಧಿ ಗೋವಿಂದರಾಜು, ಆಸ್ಪತ್ರೆಗೆ ಭೇಟಿ ನೀಡಿ ಸೂರಜ್ ಆರೋಗ್ಯ ವಿಚಾರಿಸಿದರು.