<p>ಟಾಲಿವುಡ್ನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹30 ಲಕ್ಷ ದೇಣಿಗೆ ನೀಡಿದ್ದಾರೆ.</p>.<p>ಜನಸೇನಾ ಪಕ್ಷದ ಅಧ್ಯಕ್ಷರಾಗಿರುವ ಪವನ್ ‘ಭಗವಾನ್ ಶ್ರೀರಾಮ ಧರ್ಮ ಹಾಗೂ ತಾಳ್ಮೆಯ ಪ್ರತೀಕ. ರಾಮ ಮಾಡಿದ ತ್ಯಾಗ ಹಾಗೂ ತೋರಿದ ಧೈರ್ಯ ನಮಗೆಲ್ಲರಿಗೂ ಸ್ಫೂರ್ತಿ. ಭಾರತದಲ್ಲಿ ಎಲ್ಲರೂ ರಾಮನ ಹಾದಿಯಲ್ಲಿ ನಡೆಯುತ್ತಿದ್ದಾರೆ. ಆ ಕಾರಣಕ್ಕೆ ಅಂತಹ ಧರ್ಮದ ಪ್ರತಿರೂಪವಾದ ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ರಾಮಮಂದಿರ ನಿರ್ಮಾಣಕ್ಕೆ ನನ್ನ ಕಡೆಯಿಂದ ₹ 30 ಲಕ್ಷ ದೇಣಿಗೆ ನೀಡುತ್ತಿದ್ದೇನೆ’ ಎಂದಿದ್ದಾರೆ.</p>.<p>‘ನಾನು ದೇಣಿಗೆ ನೀಡಿದ್ದನ್ನು ಕೇಳಿ ನನ್ನ ನನ್ನೊಂದಿಗೆ ಕೆಲಸ ಮಾಡುವವರೆಲ್ಲರೂ ಒಂದಾಗಿ ₹ 11,000 ದೇಣಿಗೆ ಸಂಗ್ರಹಿಸಿದ್ದಾರೆ. ಅವರಲ್ಲಿ ಬರೀ ಹಿಂದೂಗಳಲ್ಲ, ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಇದ್ದಾರೆ’ ಎಂದಿದ್ದಾರೆ.</p>.<p>ಸಿನಿಮಾಕ್ಕೆ ಸಂಬಂಧಿಸಿದಂತೆ ಪವನ್ ನಟನೆ, ಶ್ರೀರಾಮ್ ವೇಣು ನಿರ್ದೇಶನದ ‘ವಕೀಲ್ ಸಾಬ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಿವುಡ್ನ ಪಿಂಕ್ ಸಿನಿಮಾದ ರಿಮೇಕ್ ಆಗಿದೆ. ಇದರಲ್ಲಿ ಪವನ್ ವಕೀಲನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಟಾಲಿವುಡ್ನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹30 ಲಕ್ಷ ದೇಣಿಗೆ ನೀಡಿದ್ದಾರೆ.</p>.<p>ಜನಸೇನಾ ಪಕ್ಷದ ಅಧ್ಯಕ್ಷರಾಗಿರುವ ಪವನ್ ‘ಭಗವಾನ್ ಶ್ರೀರಾಮ ಧರ್ಮ ಹಾಗೂ ತಾಳ್ಮೆಯ ಪ್ರತೀಕ. ರಾಮ ಮಾಡಿದ ತ್ಯಾಗ ಹಾಗೂ ತೋರಿದ ಧೈರ್ಯ ನಮಗೆಲ್ಲರಿಗೂ ಸ್ಫೂರ್ತಿ. ಭಾರತದಲ್ಲಿ ಎಲ್ಲರೂ ರಾಮನ ಹಾದಿಯಲ್ಲಿ ನಡೆಯುತ್ತಿದ್ದಾರೆ. ಆ ಕಾರಣಕ್ಕೆ ಅಂತಹ ಧರ್ಮದ ಪ್ರತಿರೂಪವಾದ ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ರಾಮಮಂದಿರ ನಿರ್ಮಾಣಕ್ಕೆ ನನ್ನ ಕಡೆಯಿಂದ ₹ 30 ಲಕ್ಷ ದೇಣಿಗೆ ನೀಡುತ್ತಿದ್ದೇನೆ’ ಎಂದಿದ್ದಾರೆ.</p>.<p>‘ನಾನು ದೇಣಿಗೆ ನೀಡಿದ್ದನ್ನು ಕೇಳಿ ನನ್ನ ನನ್ನೊಂದಿಗೆ ಕೆಲಸ ಮಾಡುವವರೆಲ್ಲರೂ ಒಂದಾಗಿ ₹ 11,000 ದೇಣಿಗೆ ಸಂಗ್ರಹಿಸಿದ್ದಾರೆ. ಅವರಲ್ಲಿ ಬರೀ ಹಿಂದೂಗಳಲ್ಲ, ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಇದ್ದಾರೆ’ ಎಂದಿದ್ದಾರೆ.</p>.<p>ಸಿನಿಮಾಕ್ಕೆ ಸಂಬಂಧಿಸಿದಂತೆ ಪವನ್ ನಟನೆ, ಶ್ರೀರಾಮ್ ವೇಣು ನಿರ್ದೇಶನದ ‘ವಕೀಲ್ ಸಾಬ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಿವುಡ್ನ ಪಿಂಕ್ ಸಿನಿಮಾದ ರಿಮೇಕ್ ಆಗಿದೆ. ಇದರಲ್ಲಿ ಪವನ್ ವಕೀಲನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>