<p>‘ಲ್ಯಾಂಡ್ಲಾರ್ಡ್‘ ಚಿತ್ರದಲ್ಲಿ ಹೂಡಿಕೆ ಮಾಡಿದ್ದ ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಅವರು ಪಿ.ಸಿ. ಶೇಖರ್ ನಿರ್ದೇಶನದ ಮುಂಬರುವ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.</p>.ರಿಷಬ್ ಶೆಟ್ಟಿ ಫಿಲ್ಮ್ಸ್ನಿಂದ ‘ಅಧ್ಯಾಯ–2‘ : ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ.<p>‘ರಾಗಾ‘, 'ರೊಮಿಯೋ’ ನಂತಹ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪಿ.ಸಿ. ಶೇಖರ್ ಅವರು ಇದೀಗ, ಯುಗಾದಿ ಹಬ್ಬದಂದು ತಮ್ಮ ನಿರ್ದೇಶನದ 12ನೇ ಚಿತ್ರವನ್ನು ಘೋಷಿಸಿದ್ದಾರೆ.</p><p>ಶೇಖರ್ ನಿರ್ದೇಶನ, ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿರುವ ಮುಂಬರುವ ಹೊಸ ಚಿತ್ರದ ಎಲ್ಲಾ ತಯಾರಿಗಳು ಮುಗಿದಿದ್ದು, ಇನ್ನೇನು ಚಿತ್ರ ಸೆಟ್ಟೇರಬೇಕಿದೆ ಎಂದು ಚಿತ್ರತಂಡ ತಿಳಿಸಿದೆ. </p><p>ಸದ್ಯ, ಪಿ.ಸಿ. ಶೇಖರ್ ನಿರ್ದೇಶನದ ‘ಮಹಾನ್‘ ಚಿತ್ರದ ಕೊನೆಯ ಹಂತದ ಚಿತ್ರೀಕರಣದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆಯೂ ಮತ್ತೊಂದು ಹೊಸ ಚಿತ್ರಕ್ಕೆ ಕೆ.ವಿ ಸತ್ಯಪ್ರಕಾಶ್ ಜೊತೆ ಕೈ ಜೋಡಿಸಿದ್ದಾರೆ. </p><p>ಈ ಕುರಿತು ಮಾತನಾಡಿರುವ ಪಿ.ಸಿ. ಶೇಖರ್ ಅವರು, ‘ಸಾರಥಿ‘, ‘ಲ್ಯಾಂಡ್ಲಾರ್ಡ್‘ ನಂತಹ ದೊಡ್ಡ ಸಿನಿಮಾಗಳನ್ನು ಮಾಡಿರುವ ನಿರ್ಮಾಪಕರು ನನಗೆ ಅವಕಾಶ ಕೊಟ್ಟಿದ್ದು ತುಂಬಾ ಖುಷಿಯ ವಿಚಾರ. ಸದ್ಯದಲ್ಲೇ ಹೊಸ ಚಿತ್ರದ ಶೀರ್ಷಿಕೆ ಹಾಗೂ ನಟರ ಬಗ್ಗೆ ಮಾಹಿತಿ ನೀಡುತ್ತೇವೆ‘ ಎಂದಿದ್ದಾರೆ.</p><p>ಹೊಸ ಚಿತ್ರವನ್ನು ಪಿ.ಸಿ. ಶೇಖರ್ ನಿರ್ದೇಶನ ಮಾಡುತ್ತಿದ್ದರೆ, ಕೆ.ವಿ. ಸತ್ಯಪ್ರಕಾಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇವರಿಬ್ಬರ ಜತೆಗೆ ‘ರಾಗಾ‘ ಚಿತ್ರದ ನಟ ಮಿತ್ರ ಅವರು ಈ ಸಿನಿಮಾದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಲ್ಯಾಂಡ್ಲಾರ್ಡ್‘ ಚಿತ್ರದಲ್ಲಿ ಹೂಡಿಕೆ ಮಾಡಿದ್ದ ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಅವರು ಪಿ.ಸಿ. ಶೇಖರ್ ನಿರ್ದೇಶನದ ಮುಂಬರುವ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.</p>.ರಿಷಬ್ ಶೆಟ್ಟಿ ಫಿಲ್ಮ್ಸ್ನಿಂದ ‘ಅಧ್ಯಾಯ–2‘ : ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ.<p>‘ರಾಗಾ‘, 'ರೊಮಿಯೋ’ ನಂತಹ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪಿ.ಸಿ. ಶೇಖರ್ ಅವರು ಇದೀಗ, ಯುಗಾದಿ ಹಬ್ಬದಂದು ತಮ್ಮ ನಿರ್ದೇಶನದ 12ನೇ ಚಿತ್ರವನ್ನು ಘೋಷಿಸಿದ್ದಾರೆ.</p><p>ಶೇಖರ್ ನಿರ್ದೇಶನ, ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿರುವ ಮುಂಬರುವ ಹೊಸ ಚಿತ್ರದ ಎಲ್ಲಾ ತಯಾರಿಗಳು ಮುಗಿದಿದ್ದು, ಇನ್ನೇನು ಚಿತ್ರ ಸೆಟ್ಟೇರಬೇಕಿದೆ ಎಂದು ಚಿತ್ರತಂಡ ತಿಳಿಸಿದೆ. </p><p>ಸದ್ಯ, ಪಿ.ಸಿ. ಶೇಖರ್ ನಿರ್ದೇಶನದ ‘ಮಹಾನ್‘ ಚಿತ್ರದ ಕೊನೆಯ ಹಂತದ ಚಿತ್ರೀಕರಣದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆಯೂ ಮತ್ತೊಂದು ಹೊಸ ಚಿತ್ರಕ್ಕೆ ಕೆ.ವಿ ಸತ್ಯಪ್ರಕಾಶ್ ಜೊತೆ ಕೈ ಜೋಡಿಸಿದ್ದಾರೆ. </p><p>ಈ ಕುರಿತು ಮಾತನಾಡಿರುವ ಪಿ.ಸಿ. ಶೇಖರ್ ಅವರು, ‘ಸಾರಥಿ‘, ‘ಲ್ಯಾಂಡ್ಲಾರ್ಡ್‘ ನಂತಹ ದೊಡ್ಡ ಸಿನಿಮಾಗಳನ್ನು ಮಾಡಿರುವ ನಿರ್ಮಾಪಕರು ನನಗೆ ಅವಕಾಶ ಕೊಟ್ಟಿದ್ದು ತುಂಬಾ ಖುಷಿಯ ವಿಚಾರ. ಸದ್ಯದಲ್ಲೇ ಹೊಸ ಚಿತ್ರದ ಶೀರ್ಷಿಕೆ ಹಾಗೂ ನಟರ ಬಗ್ಗೆ ಮಾಹಿತಿ ನೀಡುತ್ತೇವೆ‘ ಎಂದಿದ್ದಾರೆ.</p><p>ಹೊಸ ಚಿತ್ರವನ್ನು ಪಿ.ಸಿ. ಶೇಖರ್ ನಿರ್ದೇಶನ ಮಾಡುತ್ತಿದ್ದರೆ, ಕೆ.ವಿ. ಸತ್ಯಪ್ರಕಾಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇವರಿಬ್ಬರ ಜತೆಗೆ ‘ರಾಗಾ‘ ಚಿತ್ರದ ನಟ ಮಿತ್ರ ಅವರು ಈ ಸಿನಿಮಾದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>