‘ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕಥೆಯಿದು. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೂ ಹೌದು. ಮಗುವೊಂದು ಕಾಣೆಯಾಗಿರುತ್ತದೆ. ಆದರೆ ಈ ಕಥೆ ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಕಥೆಯ ಒಂದೆಳೆ ಕೇಳಿ ಮೆಚ್ಚಿಕೊಂಡ ನಿರ್ಮಾಪಕ ಕೃಷ್ಣೇಗೌಡ ಅವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ, ಗುಂಜಲಮ್ಮ, ಸಂಗಮ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅದರಲ್ಲೂ ಗುಂಜಲಮ್ಮ ಹಾಗೂ ಸಂಗಮ್ಮ ಇಬ್ಬರೂ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ಲಂ ನಿವಾಸಿಗಳು. ನಟನೆ ಗೊತ್ತಿಲ್ಲದ ಇವರು ಸಹಜವಾಗಿ ಅಭಿನಯಿಸಿರುವುದು ಈ ಚಿತ್ರದ ವಿಶೇಷ’ ಎನ್ನುತ್ತಾರೆ ನಿರ್ದೇಶಕ ಪೃಥ್ವಿ ಕೋಣನೂರು.