ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣಂ ರಾಜು ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ, 83 ವರ್ಷದ ಕೃಷ್ಣಂ ರಾಜು ಅವರು ಅನಾರೋಗ್ಯದಿಂದ ಇಂದು ಮುಂಜಾನೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
‘ಕೃಷ್ಣಂ ರಾಜು ಅವರ ನಿಧನದಿಂದ ದುಃಖವಾಗಿದೆ. ಮುಂಬರುವ ಪೀಳಿಗೆಯವರು ಅವರ ಸಿನಿಮಾ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಸ್ಮರಿಸುತ್ತಾರೆ. ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಅವರು ರಾಜಕೀಯ ನಾಯಕರಾಗಿ ಛಾಪು ಮೂಡಿಸಿದ್ದರು. ಅವರ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Saddened by the passing away of Shri UV Krishnam Raju Garu. The coming generations will remember his cinematic brilliance and creativity. He was also at the forefront of community service and made a mark as a political leader. Condolences to his family and admirers. Om Shanti pic.twitter.com/hJyeGVpYA5
— Narendra Modi (@narendramodi) September 11, 2022
‘ಕೃಷ್ಣಂ ರಾಜು ನನಗೆ ತುಂಬಾ ಆತ್ಮೀಯರು. ಮಾಜಿ ಪ್ರಧಾನಿ ವಾಜಪೇಯಿಯವರ ಆಡಳಿತಾವಧಿಯಲ್ಲಿ ಸಚಿವರಾಗಿ ಕೆಲಸ ಮಾಡಿದ ಅವರು ನನ್ನ ಅಪಾರ ಅಭಿಮಾನಿಯಾಗಿದ್ದರು. ಅವರು ಕೈಗೊಂಡ ಹಲವು ಕಾರ್ಯಕ್ರಮಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ವೈಯಕ್ತಿಕವಾಗಿ ಉತ್ತಮ ಸ್ನೇಹಿತನನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
కేంద్ర మాజీ మంత్రి, ప్రముఖ చలనచిత్ర నటులు శ్రీ ఉప్పలపాటి వెంకట కృష్ణంరాజు గారు పరమపదించడం అత్యంత విచారకరం. మంచితనానికి మారుపేరుగా అనేకమంది అభిమానాన్ని చూరగొన్న వారి ఆత్మకు శాంతి కలగాలని ప్రార్థిస్తూ ఆయన కుటుంబ సభ్యులకు, అభిమానులకు సానుభూతి తెలియజేస్తున్నాను. pic.twitter.com/9xSQVkm2kU
— M Venkaiah Naidu (@MVenkaiahNaidu) September 11, 2022
ಲೋಕಸಭೆ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಕೃಷ್ಣಂ ರಾಜು ಅವರ ನಿಧನ ದುಃಖ ತಂದಿದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಟ್ವೀಟ್ ಮಾಡಿದ್ದಾರೆ.
లోక్ సభ సభ్యునిగా, కేంద్ర మంత్రిగా, రాజకీయ పాలనా రంగం ద్వారా, దేశ ప్రజలకు సేవలందించిన కృష్ణంరాజు మరణం విచారకరమని సీఎం అన్నారు. వారి ఆత్మకు శాంతి చేకూరాలని ప్రార్థించారు. దివంగత కృష్ణంరాజు కుటుంబ సభ్యులకు సీఎం తన ప్రగాఢ సానుభూతిని తెలియజేశారు.
— Telangana CMO (@TelanganaCMO) September 11, 2022
ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಚಿತ್ರನಟ ‘ರೆಬೆಲ್ ಸ್ಟಾರ್’ ಕೃಷ್ಣಂ ರಾಜು ಅವರ ನಿಧನ ದುಃಖ ತಂದಿದೆ. ನಟರಾಗಿ, ರಾಜಕೀಯ ನಾಯಕರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ.
కేంద్ర మాజీ మంత్రి, ప్రముఖ సినీ నటుడు రెబల్ స్టార్ కృష్ణంరాజు గారి మృతి బాధాకరం. నటుడిగా, రాజకీయ నాయకుడిగా ఆయన ప్రజలకు అందించిన సేవలు చిరస్మరణీయం. కృష్ణంరాజు గారి ఆత్మకు శాంతి చేకూరాలని కోరుకుంటూ ఆయన కుటుంబ సభ్యులకు ప్రగాఢ సానుభూతి తెలియజేస్తున్నా.
— YS Jagan Mohan Reddy (@ysjagan) September 11, 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.