ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಆರೋಪ: ನಟ ಜೈಜಗದೀಶ್ ವಿರುದ್ಧ ಪೊಲೀಸರಿಗೆ ದೂರು

Last Updated 9 ಜೂನ್ 2022, 10:41 IST
ಅಕ್ಷರ ಗಾತ್ರ

ಮಂಡ್ಯ: ನಟ ಜೈಜಗದೀಶ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ವ್ಯಕ್ತಿಯೊಬ್ಬರು ನಾಗಮಂಗಲ ತಾಲ್ಲೂಕು ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಯರಾಮೇಗೌಡ ಎನ್ನುವವರು ಜೂನ್ 5 ರಂದು ದೂರು ನೀಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಟ ಜೈಜಗದೀಶ್ ಪ್ರಯಾಣಿಸುತ್ತಿದ್ದಾಗ ಅವರಕಾರಿನಮೇಲೆ ಖಾಲಿ ನೀರಿನ ಬಾಟಲಿ ಬಿದ್ದಿದೆ.

ನಂತರ ಬೆಳ್ಳೂರು ಕ್ರಾಸ್‌ನಲ್ಲಿಜಯರಾಮೇಗೌಡ ಬಸ್ ನಿಂದ ಕೆಳಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಹಿಂದಿನಿಂದಬಂದ ಜೈಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದರು, ಹಲ್ಲೆ ನಡೆಸಿದರು ಎಂದು ಜಯರಾಮೇಗೌಡದೂರುನೀಡಿದ್ದಾರೆ.

ಘಟನೆ ಬಗ್ಗೆ ದೂರು ದಾಖಲಾಗಿದ್ದು ಮುಂದಿನ ಕ್ರಮ ಜರುಗುಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT