ತೆಲಂಗಾಣದ ಸಾಮಾಜಿಕ ಕಾರ್ಯಕರ್ತಕೋತ ಉಪೇಂದ್ರ ರೆಡ್ಡಿ ಅವರು ಇಲ್ಲಿನಅಂಬರ್ಪೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೈಕ್ಷಣಿಕ ಸಂಸ್ಥೆಯೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ, ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲು ಅರ್ಜುನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.