ಬಾಲಿವುಡ್, ಕಾಲಿವುಡ್ನಲ್ಲಿ ನಟಿಸಿದ್ದ ಪೂಜಾ ಅವರ ಸಿನಿ ಬದುಕಿಗೆ ತಿರುವು ನೀಡಿದ್ದ ಸಿನಿಮಾ, ಯೋಗರಾಜ್ ಭಟ್ ನಿರ್ದೇಶನದ ‘ಮುಂಗಾರು ಮಳೆ’. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ನಟಿಸಿದರು. ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು. ‘ದಂಡುಪಾಳ್ಯ’, ‘ಅಭಿನೇತ್ರಿ’ ಸಿನಿಮಾಗಳ ಬಳಿಕ ಸಣ್ಣ ಬ್ರೇಕ್ ತೆಗೆದುಕೊಂಡಿದ್ದರು. 2020ರ ಆರಂಭದಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಈ ಅವಧಿಯಲ್ಲಿ ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ‘ಸಂಹಾರಿಣಿ’ ಎಂಬ ಚಿತ್ರದಲ್ಲಿ ಪೂಜಾ ಕಾಣಿಸಿಕೊಂಡಿದ್ದರು.