‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಭ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.