ಎರಡನೇ ವಾರದ ನಂತರ ಸಿನಿಮಾ ನೋಡುವವರ ಸಂಖ್ಯೆ ಕಡಿಮೆಯಾಗಿರುವುದು ‘ಸಾಹೋ’ ತಂಡಕ್ಕೆ ಮನದಟ್ಟಾಗಿದೆ. ಇತ್ತೀಚೆಗಷ್ಟೇ ಚಿತ್ರದ ನಿರ್ದೇಶಕ ಸುಜಿತ್ ರೆಡ್ಡಿ ಕೂಡ ಭಾವನಾತ್ಮಕ ಪೋಸ್ಟ್ ಹಾಕಿದ್ದರು. ಬಾಲಿವುಡ್ನಲ್ಲಿ ತಮ್ಮ ಮೊದಲ ಸಿನಿಮಾ ಬಿಡುಗಡೆಯಾಗಿದೆ. ಯುವಜನರು ಹರಸಿ ಎಂದು ಅವರು ಕೇಳಿಕೊಂಡಿದ್ದರು. ಈಗ ಪ್ರಭಾಸ್ ಸಿನಿಮಾ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಚಿತ್ರದ ಕುರಿತು ಬರೆದಿದ್ದಾರೆ.