ಬೆಂಗಳೂರು: ಜಗಮಗಿಸುವ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದ ವೇದಿಕೆ ಮೇಲೆ ನಿಂತಿದ್ದ ಗಣ್ಯರು ‘ಪ್ರಜಾವಾಣಿ’ಯ ಚೊಚ್ಚಲ ಸಿನಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಘೋಷಿಸುತ್ತಿದ್ದಂತೆ ಸಿನಿ ಪ್ರೇಮಿಗಳ ಚಪ್ಪಾಳೆ ಮುಗಿಲುಮುಟ್ಟಿತ್ತು.
ನಟ ರಮೇಶ್ ಅರವಿಂದ್ ಹಾಗೂ ಸಹ ನಿರೂಪಕಿ ಅನುಶ್ರೀ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಾಹಿತಿ ಚಂದ್ರಶೇಖರ ಕಂಬಾರ, ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎನ್. ಸೀತಾರಾಮ್, ನಟಿ ಪೂಜಾ ಗಾಂಧಿ, ಗಾಯಕಿ ಎಂ.ಡಿ. ಪಲ್ಲವಿ, ಹಿರಿಯ ನಟಿ ಬಿ. ಜಯಶ್ರೀ ಮೊದಲಾದರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಹಲವು ನಟ, ನಟಿಯರು, ತಂತ್ರಜ್ಞರು, ಕಲಾವಿದರು ಸೇರಿದಂತೆ ಕನ್ನಡ ಚಿತ್ರರಂಗದ ನೂರಾರು ನಟ–ನಟಿಯರು ಸಂಭ್ರಮದಿಂದ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.