ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಬಡಕುಟುಂಬಕ್ಕೆ ಉಚಿತವಾಗಿ ಜೆಸಿಬಿ ನೀಡಿದ ಪ್ರಕಾಶ್‌ ರಾಜ್‌

Last Updated 15 ಸೆಪ್ಟೆಂಬರ್ 2021, 10:21 IST
ಅಕ್ಷರ ಗಾತ್ರ

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರಾಜ್‌ ಬಡಕುಟುಂಬವೊಂದಕ್ಕೆ ಹೊಸ ಜೆಸಿಬಿಯನ್ನು ಉಡುಗೊರೆ ನೀಡುವ ಮೂಲಕ ಆ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.

ಹೊಸ ಜೆಸಿಬಿ ವಾಹವನ್ನು ಪ್ರಕಾಶ್ ರಾಜ್‌ ಆಬಡ ಕುಟುಂಬಕ್ಕೆ ಉಚಿತವಾಗಿ ನೀಡಿದ್ದಾರೆ. ಜೆಸಿಬಿ ವಾಹವನ್ನು ಬಳಸಿ ದುಡಿದು ಜೀವನ ನಡೆಸಲು ದಾರಿ ಮಾಡಿಕೊಟ್ಟಿದ್ದಾರೆ.

ಜೆಸಿಬಿ ಹಸ್ತಾಂತರ ಮಾಡುತ್ತಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ’ಜೆಸಿಬಿ ನೀಡುವ ಮೂಲಕ ಈ ಕುಟುಂಬವನ್ನು ಆರ್ಥಿಕವಾಗಿ ಸಬಲ ಮಾಡುವ ಯತ್ನ’ ಎಂದು ಬರೆದುಕೊಂಡಿದ್ದಾರೆ. ಪ್ರಕಾಶ್‌ರಾಜ್ ಫೌಂಡೇಶನ್ ಮೂಲಕ ಈ ಜೆಸಿಬಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸದ್ಯತಮಿಳು, ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪ್ರಕಾಶ್‌ ರಾಜ್‌ , ತೆಲುಗು ಚಿತ್ರರಂಗದ ಪ್ರತಿಷ್ಠಿತ ಎಂಎಎ (ಮೂವಿ ಆರ್ಟಿಸ್ಟ್ ಅಸೋಸಿಯೇಷನ್) ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಪ್ರಕಾಶ್ ರಾಜ್‌ಗೆ ನಟ ಚಿರಂಜೀವಿ ಮತ್ತು ಮೆಗಾಸ್ಟಾರ್ ಕುಟುಂಬ ಬೆಂಬಲ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT