ಹಾವೇರಿ: ಕಾಂತಾರ ಚಿತ್ರದ ಕುರಿತು ನಟ ಚೇತನ್ ಹೇಳಿಕೆಗೆ ಹಾವೇರಿಯಲ್ಲಿ ಗುರುವಾರಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್,‘ಕಾಂತಾರ ಚಿತ್ರ ಇಡೀ ಕರ್ನಾಟಕ ಮಾತ್ರವಲ್ಲ, ದೇಶದಲ್ಲಿ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಅಂಥದ್ದರಲ್ಲಿ ಒಬ್ಬ ದುಷ್ಟ, ನೀಚ, ನಾಸ್ತಿಕವಾದಿ ನಟ ಚೇತನ್ ಕಲ್ಲು ಹಾಕುವ ಪ್ರಯತ್ನ ಮಾಡಿದ್ದು ಖಂಡನೀಯ, ಸಂಸ್ಕೃತಿ ವಿರೋಧಿ. ನಮ್ಮ ಹಿಂದೂ ಸಮಾಜ ಒಡೆಯುವ ಪ್ರಕ್ರಿಯೆ ಮಾಡ್ತಿರುವುದು ಸರಿಯಲ್ಲ’ ಎಂದು ಖಾರವಾಗಿ ನುಡಿದರು.