ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಹಿಂದೂಗಳ ಜೀವ ಮುಖ್ಯ': ಟೈಲರ್‌ ಹತ್ಯೆ ಖಂಡಿಸಿ ನಟಿ ಪ್ರಣೀತಾ ಟ್ವೀಟ್‌

Last Updated 30 ಜೂನ್ 2022, 6:05 IST
ಅಕ್ಷರ ಗಾತ್ರ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಹತ್ಯೆ ಖಂಡಿಸಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕನ್ನಡದ ನಟಿ ಪ್ರಣೀತಾ ಸುಭಾಷ್ ಈ ಘಟನೆಯನ್ನು ಖಂಡಿಸಿದ್ದಾರೆ.

ಟೈಲರ್‌ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ನಟಿ ಪ್ರಣಿತಾ, ಟ್ವಿಟರ್‌ನಲ್ಲಿಹಿಂದೂಗಳ ಜೀವ ಮುಖ್ಯ ಎಂದು ತಿಳಿಸಿದ್ದಾರೆ.

ಹಿಂದೂಗಳ ಜೀವ ಮುಖ್ಯ (Hindu Lives Matter) ಎಂದು ಬರೆದಿರುವ ಫಲಕವನ್ನು ಕೈಯಲ್ಲಿ ಹಿಡಿದು ನಿಂತಿರುವ ಫೋಟೊವನ್ನು ಟ್ವಿಟರ್‌ನಲ್ಲಿಹಂಚಿಕೊಂಡಿದ್ದಾರೆ.

ಈ ಹಿಂದೆ ಕೂಡ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ್ದ ಪ್ರಣೀತಾ, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಮರೆಮಾಚಲು ಕೆಲವರು 'ಹಿಂದೂ ಟೆರರ್' ಪದ ಬಳಕೆ ಮಾಡ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಕನ್ಹಯ್ಯ ಲಾಲ್ ಮೇಲೆ ಇಬ್ಬರು ಮುಸ್ಲಿಂ ಯುವಕರು ಅಮಾನವೀಯ ರೀತಿಯಲ್ಲಿ ಕೊಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT