ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕನ್ನಡದ ನಟಿ ಪ್ರಣೀತಾ ಸುಭಾಷ್ ಈ ಘಟನೆಯನ್ನು ಖಂಡಿಸಿದ್ದಾರೆ.
ಟೈಲರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ನಟಿ ಪ್ರಣಿತಾ, ಟ್ವಿಟರ್ನಲ್ಲಿಹಿಂದೂಗಳ ಜೀವ ಮುಖ್ಯ ಎಂದು ತಿಳಿಸಿದ್ದಾರೆ.
ಈ ಹಿಂದೆ ಕೂಡ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ್ದ ಪ್ರಣೀತಾ, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಮರೆಮಾಚಲು ಕೆಲವರು 'ಹಿಂದೂ ಟೆರರ್' ಪದ ಬಳಕೆ ಮಾಡ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಕನ್ಹಯ್ಯ ಲಾಲ್ ಮೇಲೆ ಇಬ್ಬರು ಮುಸ್ಲಿಂ ಯುವಕರು ಅಮಾನವೀಯ ರೀತಿಯಲ್ಲಿ ಕೊಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದಾರೆ.