ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ‘ಕರ್ನಾಟಕ ಗೃಹ ಮಂಡಳಿಯಲ್ಲಿ (ಕೆಎಚ್ಬಿ) ನಿವೇಶನ ಕೊಡಿಸುವುದಾಗಿ ಹೇಳಿ ಯಾರನ್ನೂ ವಂಚಿಸಿಲ್ಲ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಗಳಿಸಿದ್ದೇನೆ. ಈಗ ರಾಜಕೀಯಕ್ಕೂ ಧುಮುಕಿದ್ದೇನೆ. ಇದನ್ನು ನೋಡಿ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ. ಇದರಿಂದ ಶೀಘ್ರವೇ ಮುಕ್ತನಾಗುತ್ತೇನೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ಪಿತೂರಿ ಮಾಡಿರುವವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ’ ಎಂದರು.