ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತರ’

Last Updated 7 ಏಪ್ರಿಲ್ 2021, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜಕೀಯ ಬೆಳವಣಿಗೆ ಸಹಿಸದ ಕೆಲವರು ನನ್ನ ವಿರುದ್ಧ ಷಡ್ಯಂತರ ನಡೆಸಿದ್ದಾರೆ. ಸುಳ್ಳು ಆರೋಪಗಳ ಮೂಲಕ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಸಿನಿಮಾ ನಿರ್ಮಾಪಕ ಹರಿಪ್ರಸಾದ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ‘ಕರ್ನಾಟಕ ಗೃಹ ಮಂಡಳಿಯಲ್ಲಿ (ಕೆಎಚ್‌ಬಿ) ನಿವೇಶನ ಕೊಡಿಸುವುದಾಗಿ ಹೇಳಿ ಯಾರನ್ನೂ ವಂಚಿಸಿಲ್ಲ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಗಳಿಸಿದ್ದೇನೆ. ಈಗ ರಾಜಕೀಯಕ್ಕೂ ಧುಮುಕಿದ್ದೇನೆ. ಇದನ್ನು ನೋಡಿ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ. ಇದರಿಂದ ಶೀಘ್ರವೇ ಮುಕ್ತನಾಗುತ್ತೇನೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ಪಿತೂರಿ ಮಾಡಿರುವವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT