ಬೆಂಗಳೂರು: ಇದೇ 28ರಂದು ನಡೆದಿದ್ದ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಮತದಾನದ ಫಲಿತಾಂಶ ಗುರುವಾರ ಹೊರಬೀಳಲಿದೆ. ಈಗಾಗಲೇ ಒಂಬತ್ತು ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ಡುಕೊಂಡಿದ್ದಾರೆ.
ಮುನಿರತ್ನ ಸಮೀಪ ಸ್ಪರ್ಧಿ ಬಿಜೆಪಿಯ ತುಳಸಿ ಮುನಿರಾಜುಗೌಡ ಅವರಿಗಿಂತ 44,100 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನ 12ರ ಹೊತ್ತಿಗೆ ಸ್ಪಷ್ಟ ಫಲಿತಾಂಶ ಹೊರ ಬೀಳಲಿದೆ.
ಈಗಾಗಲೇ ಎಂಟನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಒಟ್ಟು 1,286 ನೋಟಾ ದಾಖಲಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಚ್ಚ ವೆಂಕಟ್ ನೋಟಾಕ್ಕಿಂತಲೂ ಕಡಿಮೆ, 325 ಮತಗಳನ್ನು ಪಡೆದಿದ್ದಾರೆ.
ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಮತ ಎಣಿಕೆ ಕೇಂದ್ರದಿಂದ ಬೇಸರದಿಂದ ಹೊರ ನಡೆದರು.