ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಪ್ರಿಯಾಂಕ ಕಾಣಿಸಿಕೊಂಡಿದ್ದು, ಇತ್ತೀಚೆಗೆ ಲಕ್ಷೀಪುರದಲ್ಲಿರುವ ‘ರಾಜಲಕ್ಷ್ಮಿ’ ಆಸ್ಪತ್ರೆಯಲ್ಲಿ ಚಿತ್ರದ ಚಿತ್ರೀಕರಣ ನಡೆಯಿತು. ‘ಕ್ಲೈಮ್ಯಾಕ್ಸ್ ಫೈಟ್ ಮಾಡಿ ಕುಂಬಳಕಾಯಿ ಒಡೆಯಲಾಗುತ್ತದೆ. ಇದಕ್ಕಾಗಿ ನೆಲಮಂಗಲ ಬಳಿ ಇರುವ ರೆಸಾರ್ಟ್ನಲ್ಲಿ ಸೆಟ್ ಹಾಕಲಾಗುತ್ತಿದೆ. ಪ್ರಸಕ್ತ ಸಾಮಾಜಿಕ ವಿಷಯಗಳು, ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ, ಅಪರಾಧ ಮುಂತಾದ ಗಂಭೀರ ವಿಷಯಗಳನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ’ ಎನ್ನುತ್ತಾರೆ ನಿರ್ದೇಶಕ ಗುರುಮೂರ್ತಿ.