ಬೆಂಗಳೂರು: ನಾಡಿನ ಕಣ್ಮಣಿಯಂತೆ ಮೆರೆಯತ್ತಲೇ ಅಚಾನಕ್ಕಾಗಿ ‘ಕಾಣದಂತೆ ಮಾಯವಾದ’ ನಟ ಪುನೀತ್ ರಾಜಕುಮಾರ್ ನೆನಪುಗಳನ್ನು ಉಳಿಸಲು ಯುವರತ್ನ ನಿರ್ದೇಶಕನಾದ ಸಂತೋಷ್ ಆನಂದ್ ರಾಮ್ ಅವರು ಪುನೀತ್ ರಾಜ್ಕುಮಾರ್ ಅವರ ಬಯೋಪಿಕ್ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.
ಪುನೀತ್ ರಾಜ್ಕುಮಾರ್ ನಿಧನದ ಬಳಿಕ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಅಭಿಮಾನಿಗಳ ಬಳಿ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದರು. ಇದೇ ವೇಳೆ ಅಪ್ಪು ಅವರ ಬಯೋಪಿಕ್ ಮಾಡುವಂತೆ ಅಭಿಮಾನಿಗಳು ಕೇಳಿಕೊಂಡಿದ್ದರು. ಇದಕ್ಕೆಸಂತೋಷ್ ಆನಂದ್ ರಾಮ್ ಅವರು ಮುಂದೆ ಮಾಡಬಹುದು ಎಂದು ಹೇಳಿದ್ದಾರೆ.
ಪುನೀತ್ ಅವರ ಜೀವನ ಚರಿತ್ರೆಯನ್ನು ತೆರೆಯ ಮೇಲೆ ತರಲು ನಾನು ಪ್ರಯತ್ನ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಹ ಸಖತ್ ಖುಷಿಯಾಗಿದ್ದಾರೆ.
ಅ.29ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಪುನೀತ್ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.