ಶ್ರೀವತ್ಸ ವಾಜಪೇಯಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನಕ್ಕೆ ಪುನೀತ್ ರಾಜ್ಕುಮಾರ್ ಸಾಥ್ ನೀಡಿದ್ದಾರೆ. ರೈತರ ಮೂಲ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಈ ಅಭಿಯಾನದ ಉದ್ದೇಶ. ಪುನೀತ್ ಅವರು ಈ ಅಭಿಯಾನಕ್ಕೆ ನೆರವಾಗುತ್ತಿರುವುದರಿಂದ ಕನ್ನಡ ಚಿತ್ರರಂಗದ ಅನೇಕರು ಈ ಅಭಿಯಾನಕ್ಕೆ ಜತೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಅಭಿಯಾನ ಶುರು ಮಾಡಲು ಹೊರಟಿರುವ ಪುನೀತ್, ಈಗಿನಿಂದಲೇ ಅಡಿಪಾಯ ಹಾಕುತ್ತಿದ್ದಾರೆ.