ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಅಭ್ಯುದಯಕ್ಕೆ ಪುನೀತ್ ಸಾಥ್

Last Updated 4 ಮಾರ್ಚ್ 2020, 19:30 IST
ಅಕ್ಷರ ಗಾತ್ರ

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಈವರೆಗೂ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ತಂದೆ–ತಾಯಿ ಹೆಸರಿನಲ್ಲಿ ಸ್ಥಾಪಿಸಿರುವ ಟ್ರಸ್ಟ್ ಮೂಲಕ ಸಾಕಷ್ಟು ಸಮಾಜ ಸೇವಾ ಕೈಂಕರ್ಯಗಳನ್ನು ಮಾಡುತ್ತಿದ್ದಾರೆ. ಈಗ ಪುನೀತ್ ಅವರು ’ಫೀಡ್ ಯುವರ್ ಫಾರ್ಮರ್‘ ಎಂಬ ಹೊಸ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕಅನ್ನದಾತರ ಅಭಿವೃದ್ಧಿಗಾಗಿ ಒಂದಷ್ಟು ಸಮಯ ಮೀಸಲಿಡುವ ನಿರ್ಧಾರ ಮಾಡಿದ್ದಾರೆ.

ಶ್ರೀವತ್ಸ ವಾಜಪೇಯಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನಕ್ಕೆ ಪುನೀತ್ ರಾಜ್‌ಕುಮಾರ್ ಸಾಥ್ ನೀಡಿದ್ದಾರೆ. ರೈತರ ಮೂಲ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಈ ಅಭಿಯಾನದ ಉದ್ದೇಶ. ಪುನೀತ್‌ ಅವರು ಈ ಅಭಿಯಾನಕ್ಕೆ ನೆರವಾಗುತ್ತಿರುವುದರಿಂದ ಕನ್ನಡ ಚಿತ್ರರಂಗದ ಅನೇಕರು ಈ ಅಭಿಯಾನಕ್ಕೆ ಜತೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಅಭಿಯಾನ ಶುರು ಮಾಡಲು ಹೊರಟಿರುವ ಪುನೀತ್, ಈಗಿನಿಂದಲೇ ಅಡಿಪಾಯ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT