‘ಎಲ್ಲ ಕಡೆ ಚುನಾವಣೆ ರ್ಯಾಲಿ, ಹಲವು ಕಾರ್ಯಕ್ರಮಗಳು ನಡೆಯುತ್ತಿದೆ. ಇದರ ನಡುವೆ ಸಿನಿಮಾವನ್ನು ಮಾತ್ರ ಗುರಿಯಾಗಿಸಿ ಏಕೆ ನಿರ್ಬಂಧ ಹಾಕಲಾಗುತ್ತಿದೆ. ಚಿತ್ರಮಂದಿರದೊಳಗೆ ಕೇವಲ 500–600 ಜನರಷ್ಟೇ ಇರುತ್ತಾರೆ. ಎಲ್ಲರೂ ಮಾಸ್ಕ್ ಧರಿಸಿಯೇ ಚಿತ್ರಗಳನ್ನು ನೋಡುತ್ತಿದ್ದಾರೆ. ಧೈರ್ಯವಾಗಿ ಚಿತ್ರಮಂದಿರಕ್ಕೆ ಜನರು ಬರುತ್ತಿದ್ದಾರೆ. ಎರಡೆರಡು ಇಂಟರ್ವಲ್ಗಳು ಇವೆ. ಏಕಾಏಕಿ ಈ ನಿರ್ಬಂಧ ಹೇರಿರುವುದು, ಉದ್ಯಮ, ಚಿತ್ರರಂಗವನ್ನು ನಡುನೀರಿನಲ್ಲಿ ಕೈಬಿಟ್ಟಂತಾಗಿದೆ. ಮುಂದೆ ನಿರ್ಮಾಪಕರ ಪರಿಸ್ಥಿತಿ ಏನು. ಇದು ದುಃಖಕರವಾದ ವಿಷಯ. ಒಳ್ಳೆಯ ಸಿನಿಮಾವನ್ನು ನಾವೇ ಹಾಳುಮಾಡಿದಂತಾಗಿದೆ. ಜನರ ಬೆಂಬಲ ಇರುವಾಗ ಸರ್ಕಾರವೂ ಬೆಂಬಲಕ್ಕೆ ನಿಲ್ಲಬೇಕು’ ಎಂದಿದ್ದಾರೆ.