ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ವತಿಯಿಂದ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಪುನೀತ್ ಅವರಿಗೆ ವಿಶೇಷ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 6ರಿಂದ ಏಕಕಾಲಕ್ಕೆ ಎಲ್ಲ ಚಿತ್ರಮಂದಿರಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಗೀತಾಂಜಲಿ, ಪುಷ್ಪಾಂಜಲಿ ಹಾಗೂ ದೀಪಾಂಜಲಿ ಮೂಲಕ ನಮನ ಸಲ್ಲಿಸಲಾಗುತ್ತದೆ. ಗೀತಾಂಜಲಿಯಲ್ಲಿ ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್ ಅವರು ಬರೆದ ಹಾಡಿನ ಮೂಲಕ ನಮನ ಸಲ್ಲಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.