ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದೇ ಪುನೀತ್ ಅಂತ್ಯಕ್ರಿಯೆ: ಸಂಜೆ ಬೆಂಗಳೂರಿಗೆ ಬರಲಿರುವ ಪುನೀತ್ ಪುತ್ರಿ ಧೃತಿ

Last Updated 30 ಅಕ್ಟೋಬರ್ 2021, 6:21 IST
ಅಕ್ಷರ ಗಾತ್ರ

ಬೆಂಗಳೂರು:ಶನಿವಾರ ಸಂಜೆಯೇ ಪುನೀತ್ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್‌ ತಿಳಿಸಿದ್ದಾರೆ.

ಮಧ್ಯಾಹ್ನ ಮೂರು ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಪುನೀತ್ ಅಂತಿಮಯಾತ್ರೆ ಆರಂಭವಾಗಲಿದೆ. 5 ಗಂಟೆ ಸುಮಾರಿಗೆ ಅಂತ್ಯ ಸಂಸ್ಕಾರ ನಡೆಯಲಿರುವ ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಡಾ. ರಾಜ್ ಸ್ಮಾರಕದ ಆವರಣಕ್ಕೆ ತಲುಪಲಿದೆ. ಆ ಬಳಿಕ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ ಎಂದು ರಾಕ್ ಲೈನ್ ವೆಂಕಟೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಧೃತಿ ಬೆಂಗಳೂರಿನತ್ತ:ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಪುನೀತ್ ಪುತ್ರಿ ಧೃತಿ ಅಲ್ಲಿಂದ ಹೊರಟಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ದೆಹಲಿ ತಲುಪಲಿದ್ದಾರೆ. ಅಲ್ಲಿಂದ ಚಾರ್ಟೆಡ್ ವಿಮಾನದ ಮೂಲಕ 4.30 ರ ಸುಮಾರಿಗೆ ಬೆಂಗಳೂರು ತಲುಪಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT