<p><strong>ಹೈದರಾಬಾದ್</strong>: ಪುಷ್ಪ–2 ಅಭಿನಯಕ್ಕಾಗಿ ಅಲ್ಲು ಅರ್ಜುನ್ಗೆ 'ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿ 2024'ರ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.</p><p>ಶನಿವಾರ ನಡೆದ 'ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿ ' ಪ್ರದಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. </p>.ವಿಮಾನಪತನ: ವಿಡಿಯೊ ಚಿತ್ರೀಕರಿಸಿದ ಯುವಕನಿಂದ ಹೇಳಿಕೆ ದಾಖಲು .ತೆರಿಗೆ ವಂಚನೆ: ವಿಡಿಎ ಆದಾಯದ ಮೇಲೆ ಸಿಬಿಡಿಟಿ ಕಣ್ಣು. <p>ಇದೇ ವೇಳೆ ನಿರ್ದೇಶಕ ಮಣಿರತ್ನಂ ಅವರಿಗೆ ಪೈಡಿ ಜೈರಾಜ್ ಚಲನಚಿತ್ರ ಪ್ರಶಸ್ತಿ, ನಟ ವಿಜಯ್ ದೇವರಕೊಂಡಗೆ ಕಾಂತ ರಾವ್ ಪ್ರಶಸ್ತಿ ಮತ್ತು ನಟ ಎನ್. ಬಾಲಕೃಷ್ಣ ಅವರಿಗೆ ಎನ್.ಟಿ.ಆರ್ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಗಿದೆ.</p><p>ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್, ಸಿಎಂ ರೆಡ್ಡಿ ಸೇರಿದಂತೆ ಅನೇಕರಿಗೆ ಧನ್ಯವಾದ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮಾತನಾಡಿ, 2047ರ ವೇಳೆಗೆ ತೆಲಂಗಾಣವನ್ನು 3ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ದೃಷ್ಟಿಕೋನವನ್ನು ಒತ್ತಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಚಲನಚಿತ್ರೋದ್ಯಮದ ಕೊಡುಗೆಯೂ ಮುಖ್ಯವಾದದ್ದು ಎಂದು ಹೇಳಿದ್ದಾರೆ.</p>.ಕದನ ವಿರಾಮ: ಮತದಾನದಿಂದ ಹೊರಗುಳಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ.ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಮುಂದುವರಿದ ಕಾರ್ಯಾಚರಣೆ .ಅಹಮದಾಬಾದ್ನಿಂದ ಲಂಡನ್ ತಲುಪುವ ನಿರ್ಣಯವೇ ಮುಳುವಾಯಿತು.ಬೌಂಡರಿ ಕ್ಯಾಚ್ಗಳಿಗೆ ಕಡಿವಾಣ ಹಾಕಿದ ಎಂಸಿಸಿ. <p>ಇದೇ ಸಂದರ್ಭದಲ್ಲಿ ಮಾತನಾಡಿದ ನಟ ಬಾಲಕೃಷ್ಣ, ದಿವಂಗತ ಜಾನಪದ ಗಾಯಕ ಗದ್ದರ್ ಅವರ ಹೆಸರಿನಲ್ಲಿ ಪ್ರಶಸ್ತಿ ಸಮಾರಂಭ ಆಯೋಜಿಸಿದಕ್ಕಾಗಿ ತೆಲಂಗಾಣ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಜತೆಗೆ ಹತ್ತು ವರ್ಷಗಳ ಬಳಿಕ ಕಾರ್ಯಕ್ರಮವನ್ನು ಪುನಾರಂಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪುಷ್ಪ–2 ಅಭಿನಯಕ್ಕಾಗಿ ಅಲ್ಲು ಅರ್ಜುನ್ಗೆ 'ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿ 2024'ರ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.</p><p>ಶನಿವಾರ ನಡೆದ 'ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿ ' ಪ್ರದಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. </p>.ವಿಮಾನಪತನ: ವಿಡಿಯೊ ಚಿತ್ರೀಕರಿಸಿದ ಯುವಕನಿಂದ ಹೇಳಿಕೆ ದಾಖಲು .ತೆರಿಗೆ ವಂಚನೆ: ವಿಡಿಎ ಆದಾಯದ ಮೇಲೆ ಸಿಬಿಡಿಟಿ ಕಣ್ಣು. <p>ಇದೇ ವೇಳೆ ನಿರ್ದೇಶಕ ಮಣಿರತ್ನಂ ಅವರಿಗೆ ಪೈಡಿ ಜೈರಾಜ್ ಚಲನಚಿತ್ರ ಪ್ರಶಸ್ತಿ, ನಟ ವಿಜಯ್ ದೇವರಕೊಂಡಗೆ ಕಾಂತ ರಾವ್ ಪ್ರಶಸ್ತಿ ಮತ್ತು ನಟ ಎನ್. ಬಾಲಕೃಷ್ಣ ಅವರಿಗೆ ಎನ್.ಟಿ.ಆರ್ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಗಿದೆ.</p><p>ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್, ಸಿಎಂ ರೆಡ್ಡಿ ಸೇರಿದಂತೆ ಅನೇಕರಿಗೆ ಧನ್ಯವಾದ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮಾತನಾಡಿ, 2047ರ ವೇಳೆಗೆ ತೆಲಂಗಾಣವನ್ನು 3ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ದೃಷ್ಟಿಕೋನವನ್ನು ಒತ್ತಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಚಲನಚಿತ್ರೋದ್ಯಮದ ಕೊಡುಗೆಯೂ ಮುಖ್ಯವಾದದ್ದು ಎಂದು ಹೇಳಿದ್ದಾರೆ.</p>.ಕದನ ವಿರಾಮ: ಮತದಾನದಿಂದ ಹೊರಗುಳಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ.ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಮುಂದುವರಿದ ಕಾರ್ಯಾಚರಣೆ .ಅಹಮದಾಬಾದ್ನಿಂದ ಲಂಡನ್ ತಲುಪುವ ನಿರ್ಣಯವೇ ಮುಳುವಾಯಿತು.ಬೌಂಡರಿ ಕ್ಯಾಚ್ಗಳಿಗೆ ಕಡಿವಾಣ ಹಾಕಿದ ಎಂಸಿಸಿ. <p>ಇದೇ ಸಂದರ್ಭದಲ್ಲಿ ಮಾತನಾಡಿದ ನಟ ಬಾಲಕೃಷ್ಣ, ದಿವಂಗತ ಜಾನಪದ ಗಾಯಕ ಗದ್ದರ್ ಅವರ ಹೆಸರಿನಲ್ಲಿ ಪ್ರಶಸ್ತಿ ಸಮಾರಂಭ ಆಯೋಜಿಸಿದಕ್ಕಾಗಿ ತೆಲಂಗಾಣ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಜತೆಗೆ ಹತ್ತು ವರ್ಷಗಳ ಬಳಿಕ ಕಾರ್ಯಕ್ರಮವನ್ನು ಪುನಾರಂಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>