<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರದ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದ ಆರೋಪಿ, ತೆಲುಗು ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಇಲ್ಲಿನ ನ್ಯಾಯಾಲಯ ಸೋಮವಾರ ಕಾಯ್ದಿರಿಸಿದೆ.</p><p>ಎರಡನೇ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶರು, ಜಾಮೀನು ಪ್ರಶ್ನಿಸಿ ಸಲ್ಲಿರುವ ಪೊಲೀಸರ ವಾದ ಮತ್ತು ನಟನ ಪರ ವಕೀಲರ ವಾದಗಳನ್ನು ಆಲಿಸಿದ ನಂತರ, ತಮ್ಮ ತೀರ್ಪನ್ನು 2025ರ ಜನವರಿ 3ಕ್ಕೆ ಕಾಯ್ದಿರಿಸಿದರು.</p><p>ಪ್ರಕರಣದ 11ನೇ ಆರೋಪಿಯಾಗಿರುವ ಅಲ್ಲು ಅರ್ಜುನ್ ಈ ಹಿಂದೆ ಜಾಮೀನು ಕೋರಿ ನ್ಯಾಯಾಲಯ ದಲ್ಲಿ ಅರ್ಜಿ ಸಲ್ಲಿಸಿದ್ದರು. ಡಿ. 27ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೂ ಹಾಜರಾಗಿದ್ದರು.</p><p><strong>ಬಾಲಕ ಸ್ವಲ್ಪ ಚೇತರಿಕೆ:</strong> ಕಾಲ್ತುಳಿತದ ವೇಳೆ ಗಾಯಗೊಂಡಿದ್ದ 8 ವರ್ಷದ ಬಾಲಕ ಶ್ರೀತೇಜ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸುತ್ತಿದೆ ಚಿಕಿತ್ಸೆ ನೀಡುತ್ತಿರುವ ಇಲ್ಲಿನ ಆಸ್ಪತ್ರೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರದ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದ ಆರೋಪಿ, ತೆಲುಗು ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಇಲ್ಲಿನ ನ್ಯಾಯಾಲಯ ಸೋಮವಾರ ಕಾಯ್ದಿರಿಸಿದೆ.</p><p>ಎರಡನೇ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶರು, ಜಾಮೀನು ಪ್ರಶ್ನಿಸಿ ಸಲ್ಲಿರುವ ಪೊಲೀಸರ ವಾದ ಮತ್ತು ನಟನ ಪರ ವಕೀಲರ ವಾದಗಳನ್ನು ಆಲಿಸಿದ ನಂತರ, ತಮ್ಮ ತೀರ್ಪನ್ನು 2025ರ ಜನವರಿ 3ಕ್ಕೆ ಕಾಯ್ದಿರಿಸಿದರು.</p><p>ಪ್ರಕರಣದ 11ನೇ ಆರೋಪಿಯಾಗಿರುವ ಅಲ್ಲು ಅರ್ಜುನ್ ಈ ಹಿಂದೆ ಜಾಮೀನು ಕೋರಿ ನ್ಯಾಯಾಲಯ ದಲ್ಲಿ ಅರ್ಜಿ ಸಲ್ಲಿಸಿದ್ದರು. ಡಿ. 27ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೂ ಹಾಜರಾಗಿದ್ದರು.</p><p><strong>ಬಾಲಕ ಸ್ವಲ್ಪ ಚೇತರಿಕೆ:</strong> ಕಾಲ್ತುಳಿತದ ವೇಳೆ ಗಾಯಗೊಂಡಿದ್ದ 8 ವರ್ಷದ ಬಾಲಕ ಶ್ರೀತೇಜ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸುತ್ತಿದೆ ಚಿಕಿತ್ಸೆ ನೀಡುತ್ತಿರುವ ಇಲ್ಲಿನ ಆಸ್ಪತ್ರೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>