<p><strong>ಬೆಂಗಳೂರು</strong>: ಹೈದರಾಬಾದ್ನಲ್ಲಿ ಪುಷ್ಪ–2 ಚಿತ್ರ ವೀಕ್ಷಣೆಗೆ ಹೋದಾಗ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಬಾಲಕನನ್ನು ಹಾಗೂ ಅವರ ತಂದೆಯನ್ನು ನಿರ್ದೇಶಕ ಸುಕುಮಾರ್ ಭೇಟಿಯಾಗಿದ್ದಾರೆ.</p><p>ಸದ್ಯ 8 ವರ್ಷದ ಬಾಲಕ ಇನ್ನೂ ಹೈದರಾಬಾದ್ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಆತನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.</p><p>ಬಾಲಕನ ಕುಟುಂಬಕ್ಕೆ ಸುಕುಮಾರ್ ಅವರು ₹5 ಲಕ್ಷ ಹಣ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.</p><p>ಡಿಸೆಂಬರ್ 10 ರಂದು ಹೈದರಾಬಾದ್ನ ಸಂದ್ಯಾ ಚಿತ್ರಮಂದಿರದಲ್ಲಿ ಪುಷ್ಪ–2 ವೀಕ್ಷಣೆಗೆ ಬಂದಿದ್ದ ಕುಟುಂಬವೊಂದರ ತಾಯಿ– ಮಗು ನೂಕಲಾಟ ಮತ್ತು ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p><p>ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದರಿಂದ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ ಅವರ ಬಂಧನವೂ ಆಗಿತ್ತು. ಒಂದು ದಿನ ಜೈಲಿನಲ್ಲಿ ಕಳೆದು ಬಿಡುಗಡೆಗೊಂಡಿದ್ದರು.</p><p>ಸಂದ್ಯಾ ಚಿತ್ರಮಂದಿರದ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೈದರಾಬಾದ್ನಲ್ಲಿ ಪುಷ್ಪ–2 ಚಿತ್ರ ವೀಕ್ಷಣೆಗೆ ಹೋದಾಗ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಬಾಲಕನನ್ನು ಹಾಗೂ ಅವರ ತಂದೆಯನ್ನು ನಿರ್ದೇಶಕ ಸುಕುಮಾರ್ ಭೇಟಿಯಾಗಿದ್ದಾರೆ.</p><p>ಸದ್ಯ 8 ವರ್ಷದ ಬಾಲಕ ಇನ್ನೂ ಹೈದರಾಬಾದ್ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಆತನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.</p><p>ಬಾಲಕನ ಕುಟುಂಬಕ್ಕೆ ಸುಕುಮಾರ್ ಅವರು ₹5 ಲಕ್ಷ ಹಣ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.</p><p>ಡಿಸೆಂಬರ್ 10 ರಂದು ಹೈದರಾಬಾದ್ನ ಸಂದ್ಯಾ ಚಿತ್ರಮಂದಿರದಲ್ಲಿ ಪುಷ್ಪ–2 ವೀಕ್ಷಣೆಗೆ ಬಂದಿದ್ದ ಕುಟುಂಬವೊಂದರ ತಾಯಿ– ಮಗು ನೂಕಲಾಟ ಮತ್ತು ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p><p>ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದರಿಂದ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ ಅವರ ಬಂಧನವೂ ಆಗಿತ್ತು. ಒಂದು ದಿನ ಜೈಲಿನಲ್ಲಿ ಕಳೆದು ಬಿಡುಗಡೆಗೊಂಡಿದ್ದರು.</p><p>ಸಂದ್ಯಾ ಚಿತ್ರಮಂದಿರದ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>