<p>ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಪ್ಯಾರ್’ ಚಿತ್ರದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡು ಜನಮನ್ನಣೆ ಗಳಿಸುತ್ತಿದೆ. ಎಸ್.ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>ಪಳನಿ ಡಿ.ಸೇನಾಪತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಚಿತ್ರಗ್ರಹಣದಲ್ಲಿ ಲಡಾಖ್ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಶ್ರೇಯಾ ಘೋಷಾಲ್ ಹಾಡಿಗೆ ಧ್ವನಿಯಾಗಿದ್ದಾರೆ. ಎಸ್.ಎಂ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್.ಎಸ್. ನಾಗಶ್ರೀ ಬಂಡವಾಳ ಹೂಡಿದ್ದು, ರಿಶ್ವಿನ್ಗೆ ರಾಶಿಕಾ ಶೆಟ್ಟಿ ಜೋಡಿಯಾಗಿದ್ದಾರೆ.</p>.<p>‘ಪ್ರೀತಿ, ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ಚಿತ್ರ. ರವಿಚಂದ್ರನ್ ನಾಯಕಿ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಶ್ಮೀರ, ರಾಜಸ್ಥಾನ, ಅಂಡಮಾನ್ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ ನಿರ್ದೇಶಕ. </p>.<p>ಚಿತ್ರದಲ್ಲಿ ಏಳು ಹಾಡುಗಳಿದ್ದು, ಸೋನು ನಿಗಮ್, ಕುನಾಲ್ ಗಾಂಜಾವಾಲಾ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಉಳಿದ ಹಾಡುಗಳನ್ನು ಹಾಡಿದ್ದಾರೆ. ಹಿರಿಯ ನಟ ಶ್ರೀನಿವಾಸಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಮುಂತಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಪ್ಯಾರ್’ ಚಿತ್ರದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡು ಜನಮನ್ನಣೆ ಗಳಿಸುತ್ತಿದೆ. ಎಸ್.ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>ಪಳನಿ ಡಿ.ಸೇನಾಪತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಚಿತ್ರಗ್ರಹಣದಲ್ಲಿ ಲಡಾಖ್ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಶ್ರೇಯಾ ಘೋಷಾಲ್ ಹಾಡಿಗೆ ಧ್ವನಿಯಾಗಿದ್ದಾರೆ. ಎಸ್.ಎಂ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್.ಎಸ್. ನಾಗಶ್ರೀ ಬಂಡವಾಳ ಹೂಡಿದ್ದು, ರಿಶ್ವಿನ್ಗೆ ರಾಶಿಕಾ ಶೆಟ್ಟಿ ಜೋಡಿಯಾಗಿದ್ದಾರೆ.</p>.<p>‘ಪ್ರೀತಿ, ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ಚಿತ್ರ. ರವಿಚಂದ್ರನ್ ನಾಯಕಿ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಶ್ಮೀರ, ರಾಜಸ್ಥಾನ, ಅಂಡಮಾನ್ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ ನಿರ್ದೇಶಕ. </p>.<p>ಚಿತ್ರದಲ್ಲಿ ಏಳು ಹಾಡುಗಳಿದ್ದು, ಸೋನು ನಿಗಮ್, ಕುನಾಲ್ ಗಾಂಜಾವಾಲಾ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಉಳಿದ ಹಾಡುಗಳನ್ನು ಹಾಡಿದ್ದಾರೆ. ಹಿರಿಯ ನಟ ಶ್ರೀನಿವಾಸಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಮುಂತಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>