ಚಲನಚಿತ್ರ ನಿರ್ಮಾಪಕ ದಿವಂಗತ ರಾಮು ಹಾಗೂ ಚಲನಚಿತ್ರ ಪತ್ರಕರ್ತರಾದ ಮುರಳೀಧರ ಖಜಾನೆ ಅವರಿಗೆ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ, ಹಿನ್ನಲೆ ಗಾಯಕ ಹೇಮಂತ್ ಕುಮಾರ್ ಅವರಿಗೆ ಡಾ. ರಾಜ್ಕುಮಾರ್ ಪ್ರಶಸ್ತಿ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ನಟಿ ಜಯಲಕ್ಷ್ಮಿ ಪಿ. ಅವರಿಗೆ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ, ‘ಹೊಂದಿಸಿ ಬರೆಯಿರಿ’ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ಜೋ ಕೋಸ್ಟ ಅವರಿಗೆ ಎಂ.ಎಸ್.ರಾಮಯ್ಯ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈ.ಲಿ. ಪ್ರಶಸ್ತಿ, ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರಕ್ಕಾಗಿ ನಿರ್ದೇಶಕ ಹೇಮಂತ್ ರಾವ್ಗೆ ಕೆ.ವಿ. ಜಯರಾಂ ಅವರ ಹೆಸರಿನಲ್ಲಿ ಅತ್ಯುತ್ತಮ ಕಥಾಲೇಖಕ ಪ್ರಶಸ್ತಿ, ‘ ‘ವಿರಾಟಪುರ ವಿರಾಗಿ’ ಚಿತ್ರಕ್ಕಾಗಿ ಬಿ.ಎಸ್. ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ, ‘ಆಚಾರ್ & ಕೋ’ ಚಿತ್ರದ ನಿರ್ದೇಶನಕ್ಕಾಗಿ ಸಿಂಧು ಶ್ರೀನಿವಾಸಮೂರ್ತಿಗೆ ಬಿ.ಸುರೇಶ್ ಪ್ರಶಸ್ತಿ, ‘ಟಗರು ಪಲ್ಯ’ ಚಿತ್ರದ ‘ಸಂಬಂಜ ಅನ್ನೋದು ದೊಡ್ಡದು ಕನಾ’ ಗೀತರಚನೆಗಾಗಿ ನಟ ‘ಡಾಲಿ’ ಧನಂಜಯ ಅವರಿಗೆ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಹಾಗೂ ನಟ ಸುಂದರರಾಜ್ ಅವರಿಗೆ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ ಘೋಷಣೆಯಾಗಿದೆ.