ಅಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಬೇರೆ ಊರಿನ ದೇವಸ್ಥಾನಕ್ಕೆ ತೆರಳಿ ಸಂತ್ರಸ್ತರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತೇನೆ. ಯಾವುದೇ, ಕಾರಣಕ್ಕೂ ನನ್ನ ಮನೆಯ ಹತ್ತಿರ ಕೇಕ್, ಹೂವಿನ ಹಾರಗಳನ್ನು ತರಬಾರದು. ಅದೇ ಹಣವನ್ನು ಸಂತ್ರಸ್ತರ ಪರಿಹಾರಕ್ಕೆ ವಿನಿಯೋಗಿಸಬೇಕು. ಅವರ ಪರವಾಗಿ ದೇವರಲ್ಲಿ ಪ್ರಾರ್ಥಿಸಿದರೆ ಅದು ನನಗೆ ಸಂತೋಷ ನೀಡುತ್ತದೆ ಎಂದು ಮನವಿ ಮಾಡಿದ್ದಾರೆ.