‘ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗವಹಿಸಿದ ಕಾರಣ ಈ ರೀತಿ ಆಗಿದೆ ಎಂದು ಜನರು ಅಂದುಕೊಳ್ಳಬಹುದು. ಆದರೆ, ನಾನು ಬೇರೆ ಎಲ್ಲೋ ಇದ್ದಿದ್ದರೆ ಏನಾಗುತ್ತಿತ್ತೋ. ಅವತ್ತು ಚಿತ್ರೀಕರಣವೇ ನನ್ನನ್ನು ಕಾಪಾಡಿತು. ಚಿತ್ರೀಕರಣದಲ್ಲಿದ್ದ ಕಾರಣವೇ ತಕ್ಷಣವೇ ಆಸ್ಪತ್ರೆಗೆ ಬರಲು ಸಾಧ್ಯವಾಯಿತು. ನನ್ನ ಆರೋಗ್ಯದ ಬಗ್ಗೆ ನಾನು ಕಾಳಜಿ ತೆಗೆದುಕೊಳ್ಳುತ್ತಿದ್ದೇನೆ. ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದದ ಶಕ್ತಿಯೇ ನನ್ನನ್ನು ಕಾಪಾಡುತ್ತದೆ’ ಎಂದರು. ಈ ಸಂದರ್ಭದಲ್ಲಿ ಶಿವರಾಜ್ಕುಮಾರ್ ಜೊತೆಗಿದ್ದರು.