‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’ ಎಂದು ಸಂತೋಷ್ ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಜುಲೈ 28ರಂದು ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಯಾಗುತ್ತಿದ್ದು, ಆಗಸ್ಟ್ 12ರಂದು ಗಣೇಶ್ ನಟನೆಯ ‘ಗಾಳಿಪಟ–2’ ಸಿನಿಮಾ ರಿಲೀಸ್ ಆಗಲಿದೆ. ಈ ಎರಡು ಸಿನಿಮಾ ಬಿಡುಗಡೆಯಿಂದ ಎದುರಾಗುವ ಚಿತ್ರಮಂದಿರಗಳ ಸಮಸ್ಯೆಯೂ ಚಿತ್ರ ಮುಂದೂಡಿಕೆಗೆ ಕಾರಣ ಎನ್ನಲಾಗಿದೆ. ಜೊತೆಗೆ ಸಿನಿಮಾದ ನಾಯಕ ಜಗ್ಗೇಶ್ ಅವರು ರಾಜ್ಯಸಭಾ ಸದಸ್ಯರಾದ ಬಳಿಕ ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಇದನ್ನು ಹೊಂದಿಸಿಕೊಂಡು ಪ್ರಚಾರಕ್ಕೂ ಯಾವುದೇ ಸಮಸ್ಯೆಯಾಗದಂತೆ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ.