<p>ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದಲ್ಲಿ ನಟ ರಾಜ್ ಬಿ.ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೂ ಮೊದಲೇ ಗುರುದತ್ ಜೊತೆ ಇನ್ನೊಂದು ಸಿನಿಮಾ ಮಾಡಲು ರಾಜ್ ಮುಂದಾಗಿದ್ದಾರೆ. </p>.<p>ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪ್ರಸಿದ್ಧ ‘ಜುಗಾರಿ ಕ್ರಾಸ್’ ಕೃತಿಯನ್ನು ತೆರೆ ಮೇಲೆ ತರಲು ಗುರುದತ್ ಸಜ್ಜಾಗಿದ್ದು, ಈ ಮೂಲಕ ಕಾದಂಬರಿಯೊಂದಕ್ಕೆ ಸಿನಿಮಾ ರೂಪ ನೀಡುತ್ತಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಾಯಕನಾಗಿ ರಾಜ್ ಬಿ.ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಭಿನ್ನವಾದ ಪಾತ್ರಗಳನ್ನೇ ಆಯ್ದುಕೊಂಡು ಬರುತ್ತಿರುವ ರಾಜ್, ‘ಕರಾವಳಿ’ ಸಿನಿಮಾದ ಪೋಸ್ಟರ್ನಲ್ಲಿ ಕೋಣಗಳ ಜೊತೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದರು. </p>.<p>ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದಿದೆ ಚಿತ್ರತಂಡ. ‘ಕರಾವಳಿ’ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಗುರುದತ್ ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜೊತೆಗೆ ‘ಜುಗಾರಿ ಕ್ರಾಸ್’ನಲ್ಲೂ ತೊಡಗಿಸಿಕೊಳ್ಳಲಿದ್ದಾರೆ. ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದನ್ ಈ ಸಿನಿಮಾಗೂ ಕೆಲಸ ಮಾಡಲಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ತಾರಾಬಳಗದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದಲ್ಲಿ ನಟ ರಾಜ್ ಬಿ.ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೂ ಮೊದಲೇ ಗುರುದತ್ ಜೊತೆ ಇನ್ನೊಂದು ಸಿನಿಮಾ ಮಾಡಲು ರಾಜ್ ಮುಂದಾಗಿದ್ದಾರೆ. </p>.<p>ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪ್ರಸಿದ್ಧ ‘ಜುಗಾರಿ ಕ್ರಾಸ್’ ಕೃತಿಯನ್ನು ತೆರೆ ಮೇಲೆ ತರಲು ಗುರುದತ್ ಸಜ್ಜಾಗಿದ್ದು, ಈ ಮೂಲಕ ಕಾದಂಬರಿಯೊಂದಕ್ಕೆ ಸಿನಿಮಾ ರೂಪ ನೀಡುತ್ತಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಾಯಕನಾಗಿ ರಾಜ್ ಬಿ.ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಭಿನ್ನವಾದ ಪಾತ್ರಗಳನ್ನೇ ಆಯ್ದುಕೊಂಡು ಬರುತ್ತಿರುವ ರಾಜ್, ‘ಕರಾವಳಿ’ ಸಿನಿಮಾದ ಪೋಸ್ಟರ್ನಲ್ಲಿ ಕೋಣಗಳ ಜೊತೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದರು. </p>.<p>ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದಿದೆ ಚಿತ್ರತಂಡ. ‘ಕರಾವಳಿ’ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಗುರುದತ್ ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜೊತೆಗೆ ‘ಜುಗಾರಿ ಕ್ರಾಸ್’ನಲ್ಲೂ ತೊಡಗಿಸಿಕೊಳ್ಳಲಿದ್ದಾರೆ. ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದನ್ ಈ ಸಿನಿಮಾಗೂ ಕೆಲಸ ಮಾಡಲಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ತಾರಾಬಳಗದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>